ಬೆಂಗಳೂರು : ಅಗಸ್ಟ್ ಮತ್ತು ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ. ಇದೀಗ ತಣ್ಣಗೆ ಬದಲಾವಣೆ ಗಾಳಿ ಬೀಸಲಾರಂಭಿಸಿದ್ದು, ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ನಿನ್ನೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದರು.
ಇದೀಗ ಕಾಂಗ್ರೆಸ್ ಹೈಕಮಾಂಡ್ ಡಿಸೆಂಬರ್ ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಚಿಂತನೆ ನಡೆಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನವೆಂಬರ್ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಸರ್ಕಾರ ರಚನೆಯಾಗಿ 30 ತಿಂಗಳು ಭರ್ತಿಯಾಗಲಿದೆ. ಹಾಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ಪೂರ್ಣಮಟ್ಟದ ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದಾರೆ. ಸಚಿವ ಸಂಪುಟ ಪುನಾರಚನೆ ಸಿದ್ಧತೆಯನ್ನು ಹೈಕೋರ್ಟ್ ಈಗಾಗಲೇ ಆರಂಭಿಸಿದೆ.ಕಾಂಗ್ರೆಸ್ ಪಕ್ಷದ ಮುಂದಿನ ನಾಯಕತ್ವಕ್ಕಾಗಿ ಅಳೆದು ತೂಗಿ ಲೆಕ್ಕಾಚಾರ ಹಾಕಲಾಗಿದ್ದು, ಎರಡನೇ ಹಂತದ ನಾಯಕತ್ವ ಗುರುತಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. 60% ಯಿಂದ 40% ಫಾರ್ಮುಲಾ ಅಡಿಯಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚಿಸಲಾಗುತ್ತಿದೆ.