ಬೆಂಗಳೂರು : KRS ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ಕಾಮಗಾರಿ ವಿಚಾರವಾಗಿ ಕಾವೇರಿ ಆರತಿಗೆ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ರಾಜ್ಯ ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮಕ್ಕೆ ಇದೀಗ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ ಡ್ಯಾಮ್ ಸುರಕ್ಷತಾ ಸಮಿತಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೌದು ಡ್ಯಾಮ್ ಬಳಿ 120 ಅಡಿಯಾ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ. ಕಾಮಗಾರಿ ಯಂತ್ರಗಳನ್ನು ಉಪಯೋಗಿಸಿರುವ ಫೋಟೋಗಳನ್ನು ಹೈಕೋರ್ಟಿಗೆ ಸಲ್ಲಿಸಲಾಗಿದೆ. ಅರ್ಜಿದಾರರ ಪರ ವಕೀಲ ಎಂ ಶಿವಪ್ರಕಾಶ್ ಅವರು ಕೋರ್ಟಿಗೆ ಸಲ್ಲಿಸಿದ್ದಾರೆ. ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ ಮನೋರಂಜನ ಪಾರ್ಕ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರ ವಾದ ಮಂಡಿಸಿದೆ.
ಕಾಮಗಾರಿಗೆ ಅಗೆಯುವುದರಿಂದ ಡ್ಯಾಮ್ ಗೆ ಹಾನಿ ಆಗುವುದಿಲ್ಲವೇ? ಡ್ಯಾಮ್ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ? ಈ ಬಗ್ಗೆ ಎರಡು ವಾರದಲ್ಲಿ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಹೈಕೋರ್ಟ್ ಇದೆ ವೇಳೆ ಸೂಚನೆ ನೀಡಿತು. ನ್ಯಾ ವಿ.ಕಾಮೇಶ್ವರ ರಾವ್ ಹಾಗು ನ್ಯಾ. ಸಿಎಂ ಜೋಶಿ ಅವರಿದ್ದ ಪೀಠ ಸೂಚನೆ ನೀಡಿತು.