ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬಳಿ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆ. ಹುಲಿಮರಿಗಳು ಯಾವ ಕಾರಣಕ್ಕೆ ಸತ್ತಿರುವುದು ಇನ್ನೂ ಮಾಹಿತಿ ಇಲ್ಲ. ತನಿಖಾ ವರದಿಯ ಬಂದ ಮೇಲೆ ಆ ಕುರಿತು ಚರ್ಚೆ ಮಾಡೋಣ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.
ಮುಂಬರುವ ಸೆಪ್ಟೆಂಬರ್ ನಲ್ಲಿ ಬದಲಾವಣೆಯ ಬಗ್ಗೆ ಸಚಿವ ರಾಜಣ್ಣ ಹೇಳಿಕೆಯ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರೋದು ಕ್ರಾಂತಿಯೋ ಅಥವಾ ಇನ್ಯಾವುದೋ ಗೊತ್ತಿಲ್ಲ. ಅದನ್ನು ಸಚಿವ ಕೆ.ಎನ್ ರಾಜಣ್ಣ ಅಥವಾ ಅವರ ಆಪ್ತ ಸಿಎಂ ಸಿದ್ದರಾಮಯ್ಯ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ನನಗೆ ಹೇಗೆ ಗೊತ್ತಾಗುತ್ತೆ? ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.