ಬೆಂಗಳೂರು ; ಕೆಆರ್ ಎಸ್ ಡ್ಯಾಂ ಭರ್ತಿಯಾಗಿದ್ದು, ಜೂನ್ 30 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಕಾವೇರಿ ಅಚ್ಚುಕಟ್ಟಿನಲ್ಲಿ ತುಂಬಿ ತುಳುಕುತಿದೆ. ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರು ಸೋಮವಾರ 30 ರಂದು KRS ಡ್ಯಾಂ ಗೆ ಭಾಗಿನ ಅರ್ಪಿಸಲಿದ್ದಾರೆ ಎಂದರು.
ಸ್ವತಂತ್ರ ಪೂರ್ವ ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಮುಂದಿನ ಉದ್ದೇಶ ಇಟ್ಟುಕೊಂಡು ಈ ಬೃಹತ್ ಬೆಂಗಳೂರು ಕಟ್ಟಿದ್ದಾರೆ. ಅವರನ್ನು ನಾವು ಪೂಜಿಸುವ ಕೆಲಸ ಮಾಡಬೇಕು. ಬೆಂಗಳೂರು ನಗರ ಇಲ್ಲದಿದ್ದರೆ ಕರ್ನಾಟಕಕ್ಕೆ ಮಹತ್ವ ಸಿಲ್ತಿರಲಿಲ್ಲ. ದೊಡ್ಡ ಮಟ್ಟದಲ್ಲಿ ಬೆಂಗಳೂರು ಬೆಳೆದಿರುವುದಕ್ಕೆ ಕೆಂಪೇಗೌಡರು ಕಾರಣ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಹಳೆ ಮೈಸೂರು ಅಭಿವೃದ್ಧಿ ಆಗಿದ್ರೆ ಇವರೇ ಕಾರಣ. 1940 ರಿಂದ ಇಲ್ಲಿಯವರೆಗೆ 85 ವರ್ಷ ಜೂನ್ ತಿಂಗಳಲ್ಲಿ KRS ತುಂಬಿದ ಇತಿಹಾಸ ಇಲ್ಲ, ಇವತ್ತು ಡ್ಯಾಂ ತುಂಬಿ ಜನರ ಬದುಕಿಗೆ ಉಪಯೋಗವಾಗುತ್ತಿದೆ. ಕೆಂಪೇಗೌಡರು ಒಂದು ಸಮಾಜಕ್ಕೆ ಸೀಮಿತವಲ್ಲ ನಾಡಿನ ಜನರಿಗಾಗಿ ದುಡಿದಂತವರು.
ರಾಜಕಾರಣ ಟೀಕೆ ಮಾಡೋದು ಸಹಜ. ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕೆಂಪೇಗೌಡ ಪ್ರಾಧಿಕಾರ, ಕೆಂಪೇಗೌಡ ಜಯಂತಿ ಮಾಡಲು ಸಿದ್ದರಾಮಯ್ಯ ಕಾರಣ ಎಂದರು.