ಬೆಂಗಳೂರು : ಸಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು ಇದೀಗ ಅವರ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದ್ದು, ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಈ ಕ್ರಾಂತಿಯ ಕುರಿತು ಕೆ.ಎನ್ ರಾಜಣ್ಣ ಅವರಿಗೆ ಕೇಳಬೇಕು ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ ಎಂದು ಹೇಳಿಕೆ ನೀಡಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಏನು ಬದಲಾವಣೆ ಅಂತ ರಾಜಣ್ಣ ಅವರನ್ನೇ ಕೇಳಬೇಕು. ರಾಜ್ಯ ರಾಜಕಾರಣದಲ್ಲಿ ಯಾವುದೇ ರೀತಿಯ ಬದಲಾವಣೆ ಆಗುವುದಿಲ್ಲ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದೇ ಇಲ್ಲ. ಸೆಪ್ಟೆಂಬರ್ ನಲ್ಲಿ ಕ್ರಾಂತಿಯ ಬಗ್ಗೆ ಸಚಿವ ರಾಜಣ್ಣ ಅವರಿಗೆ ಕೇಳಬೇಕು ಮುಖ್ಯಮಂತ್ರಿ ಬದಲಾವಣೆ ನಾವೇ ಮಾಡಬೇಕು ಅಲ್ವಾ? ನಾವು ವೋಟರ್ ಇದೆ ಸಿದ್ದರಾಮಯ್ಯಗೆ ಇರುವಷ್ಟು ಜನ ಬೆಂಬಲ ಯಾರಿಗೂ ಇಲ್ಲ. ಸಿಎಂ ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದರು.
ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರವಾಗಿ ಶಾಸಕರು ಅನುದಾನ ನೀಡುವಂತೆ ಕೇಳಿದ್ದು ತಪ್ಪು ಅಂತ ಹೇಳಿಲ್ಲ ಗ್ಯಾರಂಟಿ ಯೋಜನೆಗಳನ್ನು ಅನರ್ಹರಿವು ನೀಡಲಾಗುತ್ತಿದೆ ಕೆಲ ಸರ್ಕಾರಿ ನೌಕರರು ಅಧಿಕಾರಿಗಳು ಕೂಡ ಈ ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿದ್ದಾರೆ ಗ್ಯಾರಂಟಿ ಯೋಜನೆಗಳಿಂದ ಇವರನ್ನು ತೆರವು ಮಾಡಬೇಕು ಆ ಸಂದರ್ಭದಲ್ಲಿ ಕೆಲವು ತಪ್ಪುಗಳಾಗಿವೆ. ಅದನ್ನು ಸರಿಪಡಿಸಬೇಕು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದರು.