ಬೆಂಗಳೂರು : ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎನ್.ರಾಜಣ್ಣ ಮಾತು ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಜಣ್ಣ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೆ ವಿಚಾವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡಿದರು. ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ಸಚಿವ ಕೆ.ಎನ್.ರಾಜಣ್ಣ ಗುರುವಾರ ವಿಧಾನಸೌಧದಲ್ಲಿ ಮಾತನಾಡುತ್ತಾ, ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗಲಿದೆ. ಇದು ಪಕ್ಷದ ವಿಚಾರದಲ್ಲಿಯೋ, ಸರ್ಕಾರದ ವಿಚಾರದಲ್ಲಿಯೋ ಕಾದು ನೋಡಿ. ಕಾಂಗ್ರೆಸ್ನಲ್ಲಿ ಪವರ್ ಸೆಂಟರ್ಗಳು ಜಾಸ್ತಿ ಆಗಿವೆ. 2013-2018ರಲ್ಲಿ ಪವರ್ ಸೆಂಟರ್ ಒಂದೇ ಇದ್ದದ್ದು. ಈಗ ಎರಡ್ಮೂರು ಎಷ್ಟು ಬೇಕಿದ್ದರೂ ಹೇಳಿಕೊಳ್ಳಬಹುದು. ಪವರ್ ಸೆಂಟರ್ ಜಾಸ್ತಿ ಇದ್ದಾಗ ಜಂಜಾಟವೂ ಜಾಸ್ತಿ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು.