ದಾವಣಗೆರೆ: ಜಿಲ್ಲೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಕಾರಣದಿಂದಾಗಿ ವಂದೇ ಭಾರತ್ ರೈಲು ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ.
ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ವಂದೇ ಭಾರತ್ ರೈಲು ಕೆಟ್ಟು ನಿಂತಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ದಾವಣಗೆರೆಯಲ್ಲೇ ರೈಲು ನಿಲುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ರೈಲಿನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿಯಿಂದ ಮುಂದಾಗಲಿದ್ದಂತ ದುರಂತವೊಂದು ತಪ್ಪಿದೆ. ಧಾರವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದಂತ ವಂದೇ ಭಾರತ್ ರೈಲು. ರೈಲಿನ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿಗೆ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಕಳುಹಿಸಿ ಕೊಡಲಾಗಿದೆ.
ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ
ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ