ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಮನೆಯಲ್ಲಿ ಕಟ್ಟಿದ್ದ ಮೂರು ಎಮ್ಮೆಗಳ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಎಲೂರು ಜಿಲ್ಲೆ ಲಿಂಗಪಾಲಂ ಮಂಡಲದ ಮಾಥ ಗುಡೆಮ್ ಉಪನಗರದ ಸುಂದರರಾವ್ಪೇಟ್ ಗ್ರಾಮದಲ್ಲಿ ತೋರ್ಲಪತಿ ರವಿ ಎಂಬುವವರಿಗೆ ಸೇರಿದ ಮೂರು ಎಮ್ಮೆಗಳನ್ನು ಕ್ರೂರವಾಗಿ ಶಿರಚ್ಛೇದ ಮಾಡಲಾಗಿದೆ.
ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ. ಈ ವಿಷಯವನ್ನು ಧರ್ಮಜಿಗುಡೆಮ್ ಪೊಲೀಸರಿಗೆ ವರದಿ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ಆರೋಪಿಗಳನ್ನು ಶೀಘ್ರವೇ ಹಿಡಿದು ಶಿಕ್ಷೆ ವಿಧಿಸಬೇಕೆಂದು ಸುತ್ತಮುತ್ತಲಿನ ಹಳ್ಳಿಗಳ ಜನರು ಒತ್ತಾಯಿಸುತ್ತಿದ್ದಾರೆ.