ಹಾಸನ : ಹಾಸನ ಜಿಲ್ಲೆಯಲ್ಲಿ ಇತ್ತೀಚಿಗೆ ಆತಂಕಕಾರಿ ಬೆಳವಣಿಗೆ ಆಗುತ್ತಿದ್ದು, ಕಳೆದ ಒಂದೇ ತಿಂಗಳಲ್ಲಿ ನಿನ್ನೆಯವರೆಗೆ 15 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಇದೀಗ ಇಂದು ಹಾಸನದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಈ ಒಂದು ಬೆಳವಣಿಗೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿದೆ.
ಹಾಸನ ಜಿಲ್ಲೆಯಲ್ಲಿ ಹೌದು ಹೃದಯಘಾತಕ್ಕೆ ಮತ್ತೊಬ್ಬ ಬಲಿಯಾಗಿದ್ದು, ಹೃದಯಾಘಾತದಿಂದ ಗೋವಿಂದ (37) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಿದ್ಧೇಶ್ವರ ನಗರ ನಿವಾಸಿಯಾಗಿರುವ ಗೋವಿಂದ ಅವರು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಗೋವಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಆಟೋ ಚಲಾಯಿಸುವಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಟೋ ಚಲಾಯಿಸಿಕೊಂಡು ಗೋವಿಂದ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಗೋವಿಂದ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಜಲಿಯಲ್ಲಿ ಒಂದು ತಿಂಗಳ ಅಂತರದಲ್ಲಿ ಇದೀಗ 16 ಜನ ಹೃದಯಾಘಾತದಿಂದ ಸಾವನ್ನಪ್ಪಿರುವುದು ಆತಂಕಕ್ಕೆ ಈಡು ಮಾಡಿದೆ.