ಮೈಸೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಸೆಪ್ಟೆಂಬರ್ ನಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದು, ಮತ್ತೊಂದು ಕಡೆ ರಾಜ್ಯ ಬಿಜೆಪಿಯಲ್ಲು ಸಹ ರಾಜ್ಯಾಧ್ಯಕ್ಷರ ಬದಲಾವಣೆ ಆಗಲಿದೆ ಎಂಬ ಕೂಗು ಕೇಳಿ ಬರುತ್ತಿದೆ ಇದರ ಮಧ್ಯ ಆರ್ ಅಶೋಕ ಈ ಬಾರಿ ದಸರಾ ಹಬ್ಬಕ್ಕೆ ಹೊಸ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು.
ಹೌದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್ ಸದ್ಯದಲ್ಲೇ ಸಿಎಂ ಬದಲಾವಣೆ ಆಗುತ್ತದೆ ಈ ಬಾರಿ ಸಿದ್ದರಾಮಯ್ಯ ಮೈಸೂರು ದಸರಾ ಮಾಡುವುದಿಲ್ಲ ಈ ಬಾರಿ ಹೊಸ ಸಿಎಂ ದಸರಾ ಮಾಡುತ್ತಾರೆ ಎಂದು ಆರ್ ಅಶೋಕ್ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಸಿಎಂ ಬದಲಾವಣೆ ಆಗುತ್ತೆ ಎಂದು ಈಗಾಗಲೇ ಹೇಳಿದ್ದೇನೆ.ಈಗಾಗಲೇ ಮುಖ್ಯಮಂತ್ರಿ ಕುರ್ಚಿಗೆ ಕಚ್ಚಾಟ ನಡೆಯುತ್ತಿದೆ. ಇದು ಕೇವಲ ಟ್ರೈಲರ್ ಅಷ್ಟೇ ಮುಂದೆ ಪಿಕ್ಚರ್ ಬರುತ್ತದೆ.ಅವರ ಸಚಿವರೆ ಮಹಾ ಕ್ರಾಂತಿಯಾಗಲಿದೆ ಅಂತಿದ್ದಾರೆ. ಮತ್ತೆ ಕೆಲವರು ಸ್ವಲ್ಪ ಕ್ರಾಂತಿ ಆಗುತ್ತೆ ಎಂದು ಹೇಳುತ್ತಿದ್ದಾರೆ ಎಂದು ಆರ್ ಅಶೋಕ್ ತಿಳಿಸಿದರು.