ಕೊಪ್ಪಳ : ಡಿಕೆ ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರಿಯಲು ಡಿಕೆ ಶಿವಕುಮಾರ್ ಬಿಡಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಏಳುವುದಕ್ಕೂ ಬಿಡುತ್ತಿಲ್ಲ. ಕಾಂಗ್ರೆಸ್ ಅವರ ಆಂತರಿಕ ಕಚ್ಚಾಟದಿಂದಲೇ ಈ ಸರ್ಕಾರ ಬೀಳುತ್ತದೆ.ಮುಂದಿನ ಸಿಎಂ ಡಿಕೆ ಶಿವಕುಮಾರ್ ಅಲ್ಲ ಸರ್ಕಾರ ಬೀಳುತ್ತೆ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದಿ ಅಲ್ಲ ಮಜಾವಾದಿ ಎಂದು ವಾಗ್ದಾಳಿ ನಡೆಸಿದರು.ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಹೋಗುತ್ತಾರೆ. ಸಿದ್ದರಾಮಯ್ಯ ಮೂಲ ಕಾಂಗ್ರೆಸ್ಸಿಗ ಅಲ್ಲ ಅವರು ಇಂದಿಗೂ ಅತೃಪ್ತರು. ಸಿದ್ದರಾಮಯ್ಯ ಎಲ್ಲೆಲ್ಲಿ ಹೋಗಿದ್ದಾರೆ ಅಲ್ಲಿ ಮಜಾ ಉಡಾಯಿಸಿದ್ದಾರೆ.ವಸತಿ ಇಲಾಖೆಯಲ್ಲಿ ಹಗರಣ ನಡೆದಿದೆ ಆದರೂ ಸಿದ್ದರಾಮಯ್ಯನವರು ಜಮೀರ್ ಅಹ್ಮದ್ ರನ್ನು ಇಟ್ಟುಕೊಂಡಿದ್ದಾರೆ. ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಕೊಡಲೇ ರಾಜೀನಾಮೆ ಕೊಡಬೇಕಿತ್ತು, ಭ್ರಷ್ಟಾಚಾರ ಹೆಚ್ಚಾಗಿದೆ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.