ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿ ಇದ್ದಂತಹ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಾಲ್ಕು ದಿನಗಳಿಂದ ಫಾರೆಸ್ಟ್ ಗಾರ್ಡ್ ಶರತ್ (33) ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ನೀಲಗಿರಿ ಪ್ಲಾಂಟೇಶನ್ ಬಳಿ ಶರತ್ ಬಟ್ಟೆ ಹಾಗೂ ಬೈಕ್ ಪತ್ತೆಯಾಗಿದೆ. ನೀಲಗಿರಿ ಪ್ಲಾಂಟೇಶನ್ ನಿಂದ ಶರತ್ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ಕು ತಿಂಗಳ ಹಿಂದೆ ಅಷ್ಟೇ ಕಡೂರು ಅರಣ್ಯ ವಿಭಾಗಕ್ಕೆ ಶರತ್ ವರ್ಗಾವಣೆಯಾಗಿದ್ದ ಹಲವು ಅನುಮಾನಕ್ಕೆ ಇದೀಗ ಫಾರೆಸ್ಟ್ ಗಾರ್ಡ್ ನಾಪತ್ತೆ ಪ್ರಕರಣ ಕಾರಣವಾಗಿದೆ. ಈ ಕುರಿತು ಸಖರಾಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.