ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಎಟಿಎಂ ಮಷೀನ್ ದರೋಡೆಗೆ ಯತ್ನ ನಡೆದಿದ್ದು ಆದರೆ ಎಟಿಎಂ ದರೋಡೆ ಮಾಡಲು ವಿಫಲರಾದ ಕಳ್ಳರು ಸ್ಥಳದಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಬಿಳಿಚೋಡು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಕಬ್ಬಿಣದ ಸರಳು ಬಳಸಿಕೊಂಡು ಕದೀಮರು ಎಟಿಎಂ ಮಷೀನ್ ಒಡೆಯಲು ಯತ್ನಿಸಿದ್ದಾರೆ. ಇದು ಸಾಧ್ಯವಾಗದೆ ಇದ್ದಾಗ ಪೆಟ್ರೋಲ್ ಸುರದಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ದಟ್ಟ ಆವರಿಸುತ್ತಿದ್ದಂತೆ ಸುತ್ತಿದಂತೆ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಕುರಿತು ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.