ಚಿಕ್ಕಮಗಳೂರು : ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ ಇದುವರೆಗೂ 19 ಜನರು ಹಾಸನ ಜಿಲ್ಲೆ ಒಂದರಲ್ಲೆ ಸಾವನಪ್ಪಿದ್ದಾರೆ. ಇದೀಗ ಹೃದಯಾಘಾತಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಟಿವಿಎಸ್ ಶೋರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಕಾರ್ಡ್ ಒಬ್ಬರು ಕುರ್ಚಿಯ ಮೇಲೆ ಕುಳಿತಲ್ಲಿಯೇ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ, ಚಿಕ್ಕಮಂಗಳೂರಿನ ಬೇಲೂರು ರಸ್ತೆಯಲ್ಲಿರುವ ಟಿವಿಎಸ್ ಶೋರೂಮ್ ನಲ್ಲಿ ನಡೆದಿದೆ.
ಹೌದು ಕರ್ತವ್ಯ ನಿರ್ವಹಿಸುವಾಗಲೇ ಹೃದಯಘಾತದಿಂದ ಸೆಕ್ಯೂರಿಟಿ ಗಾರ್ಡ್ ಸಾವನಪ್ಪಿದ್ದಾರೆ. ಚಿಕ್ಕಮಂಗಳೂರಿನ ಬೇಲೂರು ರಸ್ತೆಯಲ್ಲಿರುವ ಟಿವಿಎಸ್ ಶೋರೂಮ್ನಲ್ಲಿ ಈ ಒಂದು ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಹಿರೇಗೌಜ ಗ್ರಾಮದ ನಿವಾಸಿ ಶಿವಾನಂದ್ (55) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಕಳೆದ ಆರು ತಿಂಗಳ ಹಿಂದೆ ಅಷ್ಟೇ ಶಿವಾನಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ. ಹಾರ್ಟ್ ಅಟ್ಯಾಕ್ ಆದ ನಂತರ ತಕ್ಷಣ ಮಲ್ಲೇಗೌಡ ಸರ್ಕಾರಿ ಜಿಲಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಇಲಾಖೆ ಶವ ಶಿಫ್ಟ್ ಮಾಡಲಾಗಿದೆ. ಟೀ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.