ದಕ್ಷಿಣಕನ್ನಡ : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಈಗ ಮದುವೆಗೆ ನಿರಾಕರಿಸಿದ್ದಾನೆ. ಹಾಗಾಗಿ ಡಿಎನ್ಎ ಪರೀಕ್ಷೆಯ ಮೂಲಕ ಪೊಲೀಸರು ಇದೀಗ ಪ್ರಕರಣವನ್ನು ಭೇದಿಸಲು ಮುಂದಾಗಿದ್ದಾರೆ.
ಹೌದು ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಕೃಷ್ಣ ಜೆ. ರಾವ್ ನಾಪತ್ತೆಯಾಗಿದ್ದಾನೆ. ಯುವಕ ಕೃಷ್ಣ ಜೆ. ರಾವ್ ವಿರುದ್ಧ ಲವ್, ಸೆಕ್ಸ್ ದೋಖಾ ಆರೋಪ ಕೇಳಿ ಬಂದಿದೆ. ಕೃಷ್ಣ ಮತ್ತು ಸಂತ್ರಸ್ತ ಯುವತಿಯ ನಡುವೆ ಪ್ರೇಮಾಂಕುರವಾಗಿದೆ. ಕೃಷ್ಣ ತನ್ನ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಯುವತಿ ಆರೋಪಿಸಿದ್ದಾಳೆ. 2014 ಅಕ್ಟೋಬರ್ 11ರಂದು ನನ್ನ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಅಲ್ಲದೇ ಮದುವೆಯಾಗುತ್ತೇನೆ ಎಂದು ನಂಬಿಸಿ ಕೃಷ್ಣ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೇ. ಅದಾದ ಬಳಿಕ 2025 ಜನವರಿಯಲ್ಲಿ ಕೂಡ ಕೃಷ್ಣ ಮತ್ತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಆ ಬಳಿಕ ಯುವತಿ ಗರ್ಭವತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ವೇಳೆ ಮದುವೆಯಾಗಲು ಕೃಷ್ಣ ನಿರಾಕರಿಸಿದ್ದಾನೆ. ನಂತರ ಸಂತ್ರಸ್ತ ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಆರಂಭದಲ್ಲಿ ಮದುವೆಗೆ ಒಪ್ಪಿಕೊಂಡು ಬಳಿ ಕೃಷ್ಣ ಇದೀಗ ಕೈ ಕೊಟ್ಟಿದ್ದಾನೆ. ಮಗುವಿಗೆ ಪಿತೃತ್ವ ಒಪ್ಪಿಕೊಳ್ಳಲು ಆರೋಪಿ ಕೃಷ್ಣ ಹಿಂದೆಟು ಹಾಕುತ್ತಿದ್ದಾನೆ.
ಹೀಗಾಗಿ ಪೊಲೀಸರು ಮಗುವಿನ ಡಿಎನ್ಎ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಕೇಸ್ ದಾಖಲಾಗುವ ಹಲವು ತಿಂಗಳ ಹಿಂದೆ ರಾಜಿ ಪಂಚಾಯಿತಿ ಕೂಡ ನಡೆದಿತ್ತು ಎನ್ನಲಾಗಿದೆ. ರಾಜಿ ಸಂಧಾನ ಆಗಿದ್ದ ಹಿನ್ನೆಲೆ ಆತನ ವಿರುದ್ಧ ಎಫ್ಐಆರ್ ದಾಖಲಿಸಿರಲಿಲ್ಲ. ರಾಜಿ ಪಂಚಾಯಿತಿ ವೇಳೆ ಕೃಷ್ಣ ಮದುವೆಗೆ ಒಪ್ಪಿದ್ದ ಆದರೆ ಯುವಕನಿಗೆ 21 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮದುವೆಗೆ ಅಡ್ಡಿಯಾಗಿತ್ತು. ಇದೀಗ ಈ ಕೃಷ್ಣ ನಾಪತ್ತೆಯಾಗಿದ್ದು ಪೊಲೀಸರು ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ.