ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರ ಗ್ರಾಮದ ತೋಟದಕೊಪ್ಪ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಮಾಲೀಕ ವಿಜಯಕುಮಾರ್ ಎಂಬವರು ಹೊಸನಗರ ಠಾಣೆಗೆ ದೂರು ನೀಡಿದ್ದಾರೆ.
ಹೌದು ಹಸುವಿನ ಕೆಚ್ಚಲು ಕೊಯ್ದು ಪಾಪಿಗಳು ಕ್ರೌರ್ಯ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ಒಂದು ರಾಕ್ಷಸಿಯ ಕೃತ್ಯ ನಡೆದಿದೆ. ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ಹಸು ಮೇಯ್ಯುತ್ತಿದ್ದಾಗ ಕೃತ್ಯ ನಡೆದಿದೆ. ವಿಜಯಕುಮಾರ್ ಗೆ ಸೇರಿದ ಹಸು ರಕ್ತಸ್ರಾವದಿಂದ ತೀವ್ರ ನರಳಾಟ ನಡೆಸುತ್ತಿದೆ. ರಕ್ತಸ್ರಾವದಿಂದ ನರಳುತ್ತಿದ್ದ ಹಸುವಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.