ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ರೈಲ್ವೆ ಕಾಮಗಾರಿಯ ಹಿನ್ನಲೆಯಲ್ಲಿ ಮೈಸೂರು ಟು ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಗಾಡಿಯ ಸಂಚಾರವನ್ನು ಮರುನಿಗದಿ / ನಿಯಂತ್ರಣ ಮಾಡಲಾಗಿದೆ.
ಈ ಕುರಿತಂತೆ ಮೈಸೂರಿನ ನೈರುತ್ಯ ರೈಲ್ವೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ವಿಭಾಗದ ಹೊಸ ಅಗ್ರಹಾರ ಮತ್ತು ಅಕ್ಕಿಹೆಬ್ಬಾಳು ಯಾರ್ಡುಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಹಿನ್ನೆಲೆ, ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ಅನ್ನು ಜುಲೈ 1, 3 ಮತ್ತು 4, 2025 ರಂದು ಮೈಸೂರು ನಿಲ್ದಾಣದಿಂದ 30 ನಿಮಿಷ ವಿಳಂಬವಾಗಿ ಹೊರಡಲಿದ್ದು
ಮತ್ತು ಮಾರ್ಗಮಧ್ಯೆ 70 ನಿಮಿಷಗಳವರೆಗೆ ನಿಯಂತ್ರಿಸಲಾಗುವುದು ಎಂದಿದ್ದಾರೆ.
GOOD NEWS: ರಾಜ್ಯದ ‘ನರ್ಸಿಂಗ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಪ್ರೋತ್ಸಾಹ ಧನ’ಕ್ಕೆ ಅರ್ಜಿ ಆಹ್ವಾನ