ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸುವರ್ಣ ಶಿಲ್ಪಿಗಳ ಮನೆತನದಲ್ಲಿ ಜನಿಸಿ ಚಿಕ್ಕಂದಿನಿಂದಲೇ ವಿವಿಧ ಪ್ರಕಾರಗಳ ಶಿಲ್ಪಕಲಾ ಕೃತಿ ರಚನೆಯಲ್ಲಿ ನೈಪುಣ್ಯತೆ ಸಾಧಿಸಿದ್ದ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ. ಕಲ್ಲು, ಲೋಹ, ಸಿಮೆಂಟ್, ಕಟ್ಟಿಗೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಮಾಧ್ಯಮಗಳಲ್ಲಿ ಕಲಾಕೃತಿಗಳ ರಚನೆಯಲ್ಲಿ ಖ್ಯಾತಿ ಪಡೆದಿದ್ದರು, ದೇವಾನುದೇವತೆಗಳ ತಯಾರಿಕೆಯಲ್ಲಿ ವಿಶೇಷ ಪರಿಣಿತಿ ಪಡೆದಿದ್ದ ಇವರಿಗೆ 2007ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಗೌರವ ಪ್ರಶಸ್ತಿ ಸಂದಿದೆ. ಅದಲ್ಲದೇ ಕರ್ನಾಟಕ ಸರ್ಕಾರದ 2022ನೇ ಸಾಲಿನ ಜಕಣಾಚಾರಿ ಪ್ರಶಸ್ತಿಗೆ ಶ್ರೀಯುತರು ಭಾಜನರಾಗಿರುತ್ತಾರೆ.
ಇವರ ನಿಧನದಿಂದ ಕನ್ನಡದ ಕಲಾ ಜಗತ್ತು ಒಬ್ಬ ಅತ್ಯುತ್ತಮ ಶಿಲ್ಪಕಲಾ ಚೇತನದಿಂದ ವಂಚಿತವಾಗಿದೆ. ಇವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಇವರ ಮನೆಯವರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
BIG NEWS: ನಮ್ಮ ಕಾಂಗ್ರೆಸ್ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತೆ: ಸಿಎಂ ಸಿದ್ಧರಾಮಯ್ಯ