ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಇದೀಗ ಹೊಸ ಕಾನೂನು ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಇಂದು ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಚರ್ಚಿಸಿದರು.
ಹೌದು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ತರುವ ವಿಚಾರವಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಇಂದು ಚರ್ಚಿಸಿದರು. ವಿಧಾನಸೌಧದಲ್ಲಿ ಎಚ್ ಕೆ ಪಾಟೀಲ್ ಕಚೇರಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಚರ್ಚೆ ಮಾಡಿದರು. ಸುಳ್ಳು ಸುದ್ದಿ ಹರಡುವ ವಿರುದ್ಧ ಕಠಿಣ ಕ್ರಮಕ್ಕೆ ಚಿಂತನೆ ನಡೆಸಿದ್ದು, ಸುಳ್ಳು ಸುದ್ದಿ ಹರಡುವವರೆಗೆ ಶಿಕ್ಷೆ ವಿಧಿಸುವ ಬಗ್ಗೆ ಪ್ರಸ್ತಾಪಿಸಲಾಯಿತು.
ಸುಳ್ಳು ಸುದ್ದಿ ಹರಡುವವರ ತಪ್ಪಿತಸ್ಥಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಹೊಸ ಕಾನೂನು ತರುವ ಬಗ್ಗೆ ಸಚಿವದ್ವಯರು ಸಮಾಲೋಚನೆ ನಡೆಸಿದ್ದಾರೆ ಮುಂಗಾರು ಅಧಿವೇಶನದಲ್ಲಿ ಬಿಲ್ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.