Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ : ಇಲ್ಲಿದೆ ಅಪ್ಲಿಕೇಶನ್.!

12/10/2025 6:07 AM

ಉದ್ಯೋಗವಾರ್ತೆ : ರಾಜ್ಯದಲ್ಲಿ `1650’ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

12/10/2025 6:04 AM

BIG NEWS : 2026-27 ನೇ ಸಾಲಿನಿಂದ ಶಾಲೆಗಳಲ್ಲಿ 3 ನೇ ತರಗತಿಯಿಂದ `AI’ ಶಿಕ್ಷಣ ಪ್ರಾರಂಭ : ಶಿಕ್ಷಣ ಸಚಿವಾಲಯ

12/10/2025 5:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ
KARNATAKA

BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ

By kannadanewsnow0930/06/2025 4:23 PM

ಮಂಡ್ಯ: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 TMC ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.

ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

BREAKING: ತೆಲಂಗಾಣ ಕೈಗಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ

Share. Facebook Twitter LinkedIn WhatsApp Email

Related Posts

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ : ಇಲ್ಲಿದೆ ಅಪ್ಲಿಕೇಶನ್.!

12/10/2025 6:07 AM2 Mins Read

ಉದ್ಯೋಗವಾರ್ತೆ : ರಾಜ್ಯದಲ್ಲಿ `1650’ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

12/10/2025 6:04 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕರ್ನಾಟಕದ 6 ಜಿಲ್ಲೆಗಳಲ್ಲಿ `ಪ್ರಧಾನಿ ಧನಧಾನ್ಯ’ ಯೋಜನೆ ಜಾರಿ

12/10/2025 5:52 AM2 Mins Read
Recent News

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ : ಇಲ್ಲಿದೆ ಅಪ್ಲಿಕೇಶನ್.!

12/10/2025 6:07 AM

ಉದ್ಯೋಗವಾರ್ತೆ : ರಾಜ್ಯದಲ್ಲಿ `1650’ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

12/10/2025 6:04 AM

BIG NEWS : 2026-27 ನೇ ಸಾಲಿನಿಂದ ಶಾಲೆಗಳಲ್ಲಿ 3 ನೇ ತರಗತಿಯಿಂದ `AI’ ಶಿಕ್ಷಣ ಪ್ರಾರಂಭ : ಶಿಕ್ಷಣ ಸಚಿವಾಲಯ

12/10/2025 5:58 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕರ್ನಾಟಕದ 6 ಜಿಲ್ಲೆಗಳಲ್ಲಿ `ಪ್ರಧಾನಿ ಧನಧಾನ್ಯ’ ಯೋಜನೆ ಜಾರಿ

12/10/2025 5:52 AM
State News
KARNATAKA

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ : ಇಲ್ಲಿದೆ ಅಪ್ಲಿಕೇಶನ್.!

By kannadanewsnow5712/10/2025 6:07 AM KARNATAKA 2 Mins Read

ಕರ್ನಾಟಕ ವಿಧಾನ ಪರಿಷತ್ತಿನ  ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ ಮತಪಟ್ಟಿಯಲ್ಲಿ…

ಉದ್ಯೋಗವಾರ್ತೆ : ರಾಜ್ಯದಲ್ಲಿ `1650’ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

12/10/2025 6:04 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕರ್ನಾಟಕದ 6 ಜಿಲ್ಲೆಗಳಲ್ಲಿ `ಪ್ರಧಾನಿ ಧನಧಾನ್ಯ’ ಯೋಜನೆ ಜಾರಿ

12/10/2025 5:52 AM

ಶೇ.83.5ರಷ್ಟು ಅಭ್ಯರ್ಥಿಗಳು ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಗೆ ಹಾಜರಿ

11/10/2025 9:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.