Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜುಲೈ 5ರಿಂದ 8ರವರೆಗೆ ಪ್ರಧಾನಿ ಮೋದಿ ‘ಬ್ರೆಜಿಲ್’ ಪ್ರವಾಸ ; ‘ಬ್ರಿಕ್ಸ್ ಶೃಂಗಸಭೆ’ಯಲ್ಲಿ ಭಾಗಿ

30/06/2025 5:07 PM

ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ

30/06/2025 5:04 PM

ಐದು ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದ್ದಲ್ಲಿ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ

30/06/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ
KARNATAKA

ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ

By kannadanewsnow0930/06/2025 5:04 PM

ಬೆಂಗಳೂರು: ದಿನೇ ದಿನೇ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಿಗೂ ಸ್ಟೆಮಿ ಯೋಜನೆ ವಿಸ್ತರಣೆಗೆ ನಿರ್ಧರಿಸಿರುವುದಾಗಿ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ.

ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು.

ಅಂದಹಾಗೇ ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ.

ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು

ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ ಬಲಿಯಾಗಿದ್ದಾರೆ.

ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

ಅಲ್ಲದೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಾಲೇಜಿನ ಎದುರುಗಡೆ ಇರುವ ಕ್ಯಾಂಟೀನ್ ನಲ್ಲಿ ಟೀ ಕುಡಿಯುತ್ತಿರುವಾಗ ಏಕಾಎಕಿ ಹೃದಯಘಾತದಿಂದ ಮುತ್ತಯ್ಯ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವು!

ಇನ್ನು ಹಾಸನ ಜಿಲ್ಲೆಯ ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್​ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ

Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದ್ದಲ್ಲಿ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ

30/06/2025 4:48 PM1 Min Read

GOOD NEWS: ರಾಜ್ಯಾಧ್ಯಂತ ‘ಸ್ಟೆಮಿ ಯೋಜನೆ’ ವಿಸ್ತರಣೆ: ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಚಿಕಿತ್ಸೆ

30/06/2025 4:39 PM1 Min Read

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!

30/06/2025 4:29 PM1 Min Read
Recent News

BREAKING : ಜುಲೈ 5ರಿಂದ 8ರವರೆಗೆ ಪ್ರಧಾನಿ ಮೋದಿ ‘ಬ್ರೆಜಿಲ್’ ಪ್ರವಾಸ ; ‘ಬ್ರಿಕ್ಸ್ ಶೃಂಗಸಭೆ’ಯಲ್ಲಿ ಭಾಗಿ

30/06/2025 5:07 PM

ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ

30/06/2025 5:04 PM

ಐದು ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದ್ದಲ್ಲಿ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ

30/06/2025 4:48 PM

Job Alert : ಉದ್ಯೋಗ ನಿರೀಕ್ಷಿತರಿಗೆ ಸಿಹಿ ಸುದ್ದಿ ; ರೈಲ್ವೆಯಲ್ಲಿ ಖಾಲಿ ಇರುವ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

30/06/2025 4:40 PM
State News
KARNATAKA

ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ

By kannadanewsnow0930/06/2025 5:04 PM KARNATAKA 2 Mins Read

ಬೆಂಗಳೂರು: ದಿನೇ ದಿನೇ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ…

ಐದು ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದ್ದಲ್ಲಿ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ

30/06/2025 4:48 PM

GOOD NEWS: ರಾಜ್ಯಾಧ್ಯಂತ ‘ಸ್ಟೆಮಿ ಯೋಜನೆ’ ವಿಸ್ತರಣೆ: ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಚಿಕಿತ್ಸೆ

30/06/2025 4:39 PM

BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!

30/06/2025 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.