Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿದ ಅಮಾನತುಗೊಂಡ ಶಾಸಕ ರಾಹುಲ್ ಮಮಕೂಟತಿಲ್, ಎಸ್ಎಫ್ಐ ಕಾರ್ಯಕರ್ತರ ಪ್ರತಿಭಟನೆ

15/09/2025 12:46 PM

ರಾಜ್ಯದಲ್ಲಿ 2000 ಕ್ಕೂ ಹೆಚ್ಚು `KSRP’ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

15/09/2025 12:42 PM

‘ರಾಜಕೀಯ ಪಕ್ಷಗಳು ಕಾರ್ಯಸ್ಥಳವಲ್ಲ, ‘POSH ಕಾಯ್ದೆ’ ಅನ್ವಯಿಸಲ್ಲ’ ಎಂದ ಸುಪ್ರೀಂ ಕೋರ್ಟ್

15/09/2025 12:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹಾಸನದಲ್ಲಿ ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ `ಹೃದಯಾಘಾತ’ಕ್ಕೆ ಬಲಿ.!
KARNATAKA

SHOCKING : ಹಾಸನದಲ್ಲಿ ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ `ಹೃದಯಾಘಾತ’ಕ್ಕೆ ಬಲಿ.!

By kannadanewsnow5701/07/2025 12:35 PM

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು. ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ.

ಮನೆಯಲ್ಲೇ ಕುಸಿದು ಬಿದ್ದು ಮಹಿಳೆ ಸಾವು!

ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ ಬಲಿಯಾಗಿದ್ದಾರೆ.

ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

ಅಲ್ಲದೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಾಲೇಜಿನ ಎದುರುಗಡೆ ಇರುವ ಕ್ಯಾಂಟೀನ್ ನಲ್ಲಿ ಟೀ ಕುಡಿಯುತ್ತಿರುವಾಗ ಏಕಾಎಕಿ ಹೃದಯಘಾತದಿಂದ ಮುತ್ತಯ್ಯ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವು!

ಇನ್ನು ಹಾಸನ ಜಿಲ್ಲೆಯ ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.

ಮಲಗಿದ್ದಾಗಲೇ ನಾಡಕಚೇರಿಯ ಡಿ ಗ್ರೂಪ್ ನೌಕರ ಸಾವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೌದು ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಎನ್ನುವವರು ಸಾವನಪ್ಪಿದ್ದಾರೆ. ಚೆನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿರುವ ಅವರು ರಾತ್ರಿ ಮನೆಯಲ್ಲಿ ಮಲಗಿದ್ದಾಗ ಕುಮಾರ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಆಗಲಿ ಅವರು ಸಾವನ್ನಪ್ಪಿದ್ದಾರೆ.ಈ ಮೂಲಕ ಹಾಸನದಲ್ಲಿ ಇದುವರೆಗೂ ಕಳೆದ 40 ದಿನಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ತಜ್ಞರಿಗೆ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಈ ಘಟನೆಗಳ ಸಂಬಂಧ 10 ದಿನಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಜ್ಞರ ಸಮಿತಿಗರ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುಮಾರು 18 ಜನರು ಹೃದಯಘಾತಕ್ಕೆ ಒಳಗಾಗಿ ಸಾವನಪ್ಪಿದ್ದರರೆ ಎಂಬುದಾಗಿ ಸಮೂಹ ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಯಲ್ಲಿ ಪ್ರಕಟಣೆಗೊಂಡಿರುತ್ತದೆ ಎಂದಿದ್ದಾರೆ.

ಸದರಿ ವಿಷಯದ ಬಗ್ಗೆ ಈಗಾಗಲೇ ಸರ್ಕಾರದಿಂದ ಸುತ್ತೋಲೆ ಸಂಖ್ಯೆ: ಆಕುಕ 66 ಸಿಜಿಎಂ 2025, ದಿ:05.05.2025ರ ಅನ್ವಯ, ನಿರ್ದೇಶಕರು, ಶ್ರೀ ಜಯದೇವ ಹೃದ್ರೋಗ ಸಂಸ್ಥೆ ಬೆಂಗಳೂರು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ಸದರಿ ವಿಷಯವನ್ನು ಸಹ Hassan Institute of Medical Science ಇವರ ಸಹಯೋಗದೊಂದಿಗೆ ಪರಿಶೀಲಿಸಿ, 10 ದಿನಗಳೊಳಗಾಗಿ ವರದಿಯನ್ನು ನೀಡಲು ಸೂಚಿಸಿದ್ದಾರೆ.

SHOCKING: A man who was married two months ago died of a heart attack in Hassan.!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 2000 ಕ್ಕೂ ಹೆಚ್ಚು `KSRP’ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

15/09/2025 12:42 PM1 Min Read

BREAKING : ಮಾಜಿ ಸಚಿವ ಬಿ ನಾಗೇಂದ್ರ ಆಪ್ತರಿಗೆ ಬಿಗ್ ಶಾಕ್ : ವಾಲ್ಮೀಕಿ ಹಗರಣದ ಪ್ರಕರಣಕ್ಕೆ ‘CBI’ ಎಂಟ್ರಿ!

15/09/2025 12:29 PM1 Min Read

ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು : CM ಸಿದ್ದರಾಮಯ್ಯ

15/09/2025 12:26 PM1 Min Read
Recent News

ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿದ ಅಮಾನತುಗೊಂಡ ಶಾಸಕ ರಾಹುಲ್ ಮಮಕೂಟತಿಲ್, ಎಸ್ಎಫ್ಐ ಕಾರ್ಯಕರ್ತರ ಪ್ರತಿಭಟನೆ

15/09/2025 12:46 PM

ರಾಜ್ಯದಲ್ಲಿ 2000 ಕ್ಕೂ ಹೆಚ್ಚು `KSRP’ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

15/09/2025 12:42 PM

‘ರಾಜಕೀಯ ಪಕ್ಷಗಳು ಕಾರ್ಯಸ್ಥಳವಲ್ಲ, ‘POSH ಕಾಯ್ದೆ’ ಅನ್ವಯಿಸಲ್ಲ’ ಎಂದ ಸುಪ್ರೀಂ ಕೋರ್ಟ್

15/09/2025 12:36 PM

BREAKING : ಮಾಜಿ ಸಚಿವ ಬಿ ನಾಗೇಂದ್ರ ಆಪ್ತರಿಗೆ ಬಿಗ್ ಶಾಕ್ : ವಾಲ್ಮೀಕಿ ಹಗರಣದ ಪ್ರಕರಣಕ್ಕೆ ‘CBI’ ಎಂಟ್ರಿ!

15/09/2025 12:29 PM
State News
KARNATAKA

ರಾಜ್ಯದಲ್ಲಿ 2000 ಕ್ಕೂ ಹೆಚ್ಚು `KSRP’ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5715/09/2025 12:42 PM KARNATAKA 1 Min Read

ಬೆಂಗಳೂರು : ಕೆ.ಎಸ್.ಆರ್.ಪಿ. ಸ್ಟೆ.ಆರ್ಪಿಸಿ (ಸ್ಥಳಿಯೇತರ) 1500 ಹುದ್ದೆ (ಸ್ಥಳೀಯ ವೃಂದದ) 366 ಹುದ್ದೆಗಳನ್ನು ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ…

BREAKING : ಮಾಜಿ ಸಚಿವ ಬಿ ನಾಗೇಂದ್ರ ಆಪ್ತರಿಗೆ ಬಿಗ್ ಶಾಕ್ : ವಾಲ್ಮೀಕಿ ಹಗರಣದ ಪ್ರಕರಣಕ್ಕೆ ‘CBI’ ಎಂಟ್ರಿ!

15/09/2025 12:29 PM

ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು : CM ಸಿದ್ದರಾಮಯ್ಯ

15/09/2025 12:26 PM

ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ಭಾರಿ ಮಳೆ, ಹವಾಮಾನ ಇಲಾಖೆ ಮಾಹಿತಿ

15/09/2025 12:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.