Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 6 ಮಂದಿ ಬಲಿ : ಜನರಲ್ಲಿ ಹೆಚ್ಚಿದ ಆತಂಕ | Heart attack
KARNATAKA

SHOCKING : ರಾಜ್ಯದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 6 ಮಂದಿ ಬಲಿ : ಜನರಲ್ಲಿ ಹೆಚ್ಚಿದ ಆತಂಕ | Heart attack

By kannadanewsnow5702/07/2025 7:23 AM

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮಂಗಳವಾರ ಮತ್ತೆ ಆರು ಜನ ಬಲಿಯಾಗಿದ್ದಾರೆ. ಈ ಪೈಕಿ ಹಾಸನದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಹೊಳೆನರಸೀಪುರದ ಸಂಜಯ್, ಹಾಸನ ತಾಲೂಕು ಕೊಮ್ಮೇನಹಳ್ಳಿ ಹರ್ಷಿತಾ ಹಾಗೂ ಬೇಲೂರು ತಾಲೂಕಿನ ರವಿಕುಮಾರ್ ಮೃತರು. ಶಿವಮೊಗ್ಗ ಹೊರವಲಯದಲ್ಲಿ ಶ್ರೀನಿಧಿ ಎಂಬ ವಿದ್ಯಾರ್ಥಿ, ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಇಬ್ಬರು ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ.
ಮದುವೆಯಾದ ಎರಡೇ ತಿಂಗಳಿಗೆ ಯುವಕ ಸಾವು!

ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ. ಸಂಜಯ್ ಕಳೆದ ಎರಡು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಇದೀಗ ಇವರ ಸಾವಿನಿಂದ ಸಂಜೆ ಕುಟುಂಬಸ್ಥರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಒಂದುವರೆ ತಿಂಗಳ ಬಾಣಂತಿ ಬಲಿ!

ಇನ್ನು ಇದೆ ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು ಗ್ರಾಮದ ತವರು ಮನೆಯಲ್ಲಿದ್ದ ಹರ್ಷಿತಾ (22) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಕೊಮ್ಮೆನಹಳ್ಳಿಯ ಒಂದುವರೆ ತಿಂಗಳ ಬಾಣಂತಿ ಹರ್ಷಿತಾ ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಐನೂರು ಗ್ರಾಮದಲ್ಲಿ ಅಕ್ಷಿತ ಸಾವನ್ನಪ್ಪಿದ್ದಾರೆ.

ಬಾಣಂತಕ್ಕೆ ಹರ್ಷಿತಾ ಶಿವಮೊಗ್ಗ ಜಿಲ್ಲೆಯ ಆಯನೂರು ಗ್ರಾಮದ ತವರು ಮನೆಯಲ್ಲಿ ಇದ್ದರು. ಇವರು ಹಾಸನದ ಕೊಮ್ಮೇನಹಳ್ಳಿಯ ನಿವಾಸಿಯಾಗಿದ್ದು, ಹೆರಿಗೆ ಬಳಿಕ ತವರಿಗೆ ತೆರಳಿದ್ದರು. ಮೊನ್ನೆ ರಾತ್ರಿ ಹರ್ಷಿತಾಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೊಮ್ಮೇನಹಳ್ಳಿ ಗ್ರಾಮದಿಂದ ಹರ್ಷಿತಾ ತಮ್ಮ ಪತಿಯನ್ನು ಕರೆಸಿಕೊಂಡಿದ್ದಾರೆ. ಆದರೆ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ಕರೆದೋಯ್ಯುವಾಗಲೇ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ದಕ್ಷಿಣಕನ್ನಡದಲ್ಲೂ ಹಾರ್ಟ್ ಅಟ್ಯಾಕ್ ನಿಂದ ವ್ಯಕ್ತಿ ಸಾವು!

ಇನ್ನು ದಕ್ಷಿಣಕನ್ನಡ ಜಿಲ್ಲೆಯ ಗಂಪದಕೋಡಿಯ ವಜ್ರಾಕ್ಷ ಪೂಜಾರಿ (53) ಎನ್ನುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಪದಕೋಡಿ ಗ್ರಾಮದ ನಿವಾಸಿಯಾಗಿದ್ದಾರೆ. ನಿನ್ನೆ ರಾತ್ರಿ ವಜ್ರಾಕ್ಷ ಪೂಜಾರಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಉಜಿರೆಯ ಖಾಸಗಿ ಆಸ್ಪತ್ರೆಗೆ ವಜ್ರಾಕ್ಷ ಪೂಜಾರಿ ದಾಖಲಾಗಿದ್ದರು ಆಸ್ಪತ್ರೆಯಲ್ಲಿ ವಜ್ರಾಕ್ಷಾ ಪೂಜಾರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಹಾರ್ಟ್ ಅಟ್ಯಾಕ್ ಗೆ ಸರ್ಕಾರಿ ವೈದ್ಯ ಬಲಿ!

ಅದೇ ರೀತಿ ಶಿವಮೊಗ್ಗದಲ್ಲಿ ಹೃದಯಘಾತಕ್ಕೆ ಸರ್ಕಾರಿ ವೈದ್ಯ ಬಲಿಯಾಗಿದ್ದಾರೆ. ಹೃದಯಘಾತದಿಂದ ಸರ್ಕಾರಿ ವೈದ್ಯ ಸಂದೀಪ್ (48) ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಸಂದೀಪ್ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾಗಿ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದೀಗ ಹೃದಯಘಾತದಿಂದ ಸಂದೀಪ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಾತ್ರೆ ಸೇವಿಸುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು!

ಚಿಕ್ಕಮಂಗಳೂರಿನಲ್ಲೂ ಕೂಡ ಹೃದಯಾಘಾತ ಆತಂಕ ಸೃಷ್ಟಿಸಿದ್ದು, ಮೆಡಿಕಲ್ ನಲ್ಲಿ ಮಾತ್ರೆ ಖರೀದಿಸುವಾಗಲೇ ವ್ಯಕ್ತಿಯೊಬ್ಬರಿಗೆ ಹೃದಯಘಾತವಾಗಿದೆ. ಮಾತ್ರೆ ಸೇವಿಸಲು ನೀರು ಬೇಡುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮೃತರು ಕೋಟೆ ಬಡಾವಣೆಯ ವಿಶ್ವನಾಥ್ (50) ಸಾವನಪ್ಪಿದ್ದಾರೆ.

ವಿಶ್ವನಾಥ್ ಅವರು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಜೂನ್ 26ರಂದು ದೀಪ ನರಸಿಂಗ್ ಹೋಂ ಬಳಿ ಈ ಒಂದು ಘಟನೆ ನಡೆದಿತ್ತು. ಹೃದಯಾಘಾರದಿಂದ ಸಾವನ್ನಪ್ಪಿದ್ದಾರೆ ಎಂದು ವೈದರು ಕೂಡ ದೃಢಪಡಿಸಿದ್ದಾರೆ. ಚಿಕ್ಕಮಗಳೂರಲ್ಲಿ ಎರಡು ತಿಂಗಳಲ್ಲಿ ಒಟ್ಟು 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಬಿಜೆಪಿ ಯುವ ಮುಖಂಡ ಸಾವು!

ಇನ್ನು ತುಮಕೂರಿನಲ್ಲಿ ಬಿಜೆಪಿಯ ಯುವ ಮುಖಂಡ ನೀಲಕಂಠ ಸ್ವಾಮಿ, (36) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.ತುಮಕೂರು ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ನೀಲಕಂಠ ಸ್ವಾಮಿ ಇದು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ರಾಜ್ಯ ಸರ್ಕಾರ ಕೂಡ ಹೃದಯಾಘಾತಕ್ಕೆ ಏನು ಕಾರಣ ಎಂದು ಈಗಾಗಲೇ ಆರೋಗ್ಯ ಇಲಾಖೆ ಒಂದು ಕಮಿಟಿ ಸಹ ರಚನೆ ಮಾಡಿದೆ. ಇಂದು ಬೆಳಿಗ್ಗೆಯಿಂದ ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ

ಇತ್ತಿಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನು ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸುವ ಕುರಿತಂತೆ ಹಾಸನ ಪ್ರಕರಣಗಳ ವರದಿ ಬಂದ ಬಳಿಕ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿವೆ. ಈ ಬಗ್ಗೆ ಹಾಸನ ಆರೋಗ್ಯ ಅಧಿಕಾರಿಗಳ ಜೊತೆ ಸಂಪರ್ಕಿಸಿ, ಹೃದಯಾಘಾತಗಳ ಬಗ್ಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ತಿಳಿಸಲಾಗಿದೆ. ಜಯದೇವ ಎದೆರೋಗ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈಗಾಗಲೇ ಕೋವಿಡ್ ಅಡ್ಡ ಪರಿಣಾಮದಿಂದ ಆಗಿರುವ ಸಾವುಗಳು, ಹೃದಯಾಘಾತಗಳ ಕುರಿತಂತೆ ಸಂಶೋಧನೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಇದೀಗ ಹಾಸನ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ಇದೇ ಸಮಿತಿಗೆ ಜವಾವ್ದಾರಿ ವಹಿಸಲಾಗಿದೆ. 10 ದಿನಗಳ ಒಳಗಾಗಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿವೆ ಎಂಬುದರ ಬಗ್ಗೆ ಸಂಶೋಧನೆ ನಡೆಯಬೇಕಿದೆ. ರಾಜ್ಯದ ಆರೋಗ್ಯ ಇಲಾಖೆಯಿಂದ ಈ ಮಟ್ಟದ ಸಂಶೋಧನೆ ನಡೆಸುವುದು ಕಷ್ಟ. WHO, ICMR, ನಂತಹ ಸಂಸ್ಥೆಗಳು ಈ ಬಗ್ಗೆ ವಿಸ್ತೃತವಾದ ಸಂಶೋಧನ ನಡೆಸಲು ಶಕ್ತವಾಗಿವೆ. ಸದ್ಯಕ್ಕೆ ಹಾಸನದಲ್ಲಿ ನಡೆದ ಹೃದಯಾಘಾತಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತಜ್ಞರ ತಂಡದೊಂದಿಗೆ ಚರ್ಚಿಸಿ ಮುಂದೆ ಏನು ಮಾಡಬೇಕು ಎಂಬುದನ್ನ ತೀರ್ಮಾನಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಹೃದಯಾಘಾತಗಳು ಹೆಚ್ಚಾಗಲು, ಬದಲಾದ ಜೀವನಶೈಲ, ಆಹಾರ, ಅಸಾಂಕ್ರಾಮಿಕ ರೋಗಗಳು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದರೆ ಹೆಚ್ಚಿನ ಅಂಕಿ ಅಂಶಗಳನ್ನ ಕಲೆ ಹಾಕಿ ಹೆಚ್ಚಿನ ಸಂಶೋಧನೆ ನಡೆಸಬೇಕಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ಪ್ರಕರಣಗಳ ಅಂಕಿ ಅಂಶಗಳು ಮಾತ್ರ ಇದೆ. ಖಾಸಗಿ ಆಸ್ಪತ್ರೆಗಳಿಂದಲೂ ನಮಗೆ ಅಂಕಿ ಅಂಶಗಳ ಬೇಕಾಗುತ್ತದೆ. ಹೃದಯಾಘಾತವನ್ನು ಅಧಿಸೂಚಿತ ರೋಗ ಎಂದು ಪರಿಗಣಿಸಿದಾಗ ಮಾತ್ರ ಖಾಸಗಿ ಆಸ್ಪತ್ರೆಗಳಿಂದಲೂ ಅಂಕಿ ಅಂಶಗಳು ದೊರೆಯುತ್ತವೆ. ಆದರೆ ಈ ಬಗ್ಗೆ ಆತುರದಲ್ಲಿ ನಿರ್ಧಾರ ಕೈಗೊಳ್ಳುವುದಿಲ್ಲ. ಹಾಸನ

SHOCKING: 6 people died of heart attacks in the state yesterday: Increased anxiety among people | Heart attack
Share. Facebook Twitter LinkedIn WhatsApp Email

Related Posts

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM1 Min Read

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read
Recent News

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

05/07/2025 5:15 AM

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
State News
KARNATAKA

BIG NEWS : ಇಂದಿನಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

By kannadanewsnow0505/07/2025 5:15 AM KARNATAKA 1 Min Read

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ…

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.