Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ಹೈಸ್ಕೂಲ್ ಮಕ್ಕಳಲ್ಲೂ ಹೈಪರ್ ಟೆನ್ಷನ್: ಹುಬ್ಬಳ್ಳಿ ಕಿಮ್ಸ್ ವೈದ್ಯರ ಅಧ್ಯಯನದಿಂದ ಆಘಾತಕಾರಿ ಸಂಗತಿ ಬಯಲು
LIFE STYLE

SHOCKING: ಹೈಸ್ಕೂಲ್ ಮಕ್ಕಳಲ್ಲೂ ಹೈಪರ್ ಟೆನ್ಷನ್: ಹುಬ್ಬಳ್ಳಿ ಕಿಮ್ಸ್ ವೈದ್ಯರ ಅಧ್ಯಯನದಿಂದ ಆಘಾತಕಾರಿ ಸಂಗತಿ ಬಯಲು

By kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡಿರುವ ಆಘಾತಕಾರಿ ಸಂಗತಿ ಅಧ್ಯಯನದಿಂದ ಹೊರ ಬಿದ್ದಿದೆ.

ಅಧ್ಯಯನಕ್ಕೆ ಒಳಪಟ್ಟ 8 ಮತ್ತು 9 ನೇ ತರಗತಿಯ 30 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಮಧುಮೇಹದಿಂದ ಬಳಲುತ್ತಿದ್ದರೆ, ನಾಲ್ಕು ವಿದ್ಯಾರ್ಥಿಗಳು ಹೈಪರ್ ಟೆನ್ಷನ್ ನಿಂದ ನರಳುತ್ತಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ! 11 ವಿದ್ಯಾರ್ಥಿಗಳಲ್ಲಿ ಟೈಗ್ರಿಸೈರೆಡ್ ( ಕೊಬ್ಬು) ಕೊಬ್ಬಿನಾಂಶ ಹೆಚ್ಚಾಗಿದ್ದು, ಒಬ್ಬ ವಿದ್ಯಾರ್ಥಿಯಲ್ಲಿ ಅಪಾಯಕಾರಿ ಹಂತ ತಲುಪಿದೆ!

ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್‌ ಸೆಂಟರ್ ನ ಮಲ್ಟಿ ಡಿಸಿಪ್ಲೆನರಿ ರಿಸರ್ಚ್‌ ಘಟಕ ಇತ್ತೀಚಿನ ದಿನಗಳಲ್ಲಿ ಕಿಶೋರರಲ್ಲಿ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಅಧ್ಯಯನ ನಡೆಸಿತು. ಧಾರವಾಡ ಜಿಲ್ಲೆಯಲ್ಲಿ 8 ರಿಂದ 9 ನೇ ತರಗತಿಯಲ್ಲಿ ವ್ಯಾಸಂಗ ಮಾಆಡುತ್ತಿರುವ ಆರು ಶಾಲೆಗಳ 30 ಅಧಿಕ ತೂಕದ ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಬಾಲ್ಯಾವ್ಯಸ್ಥೆಯಲ್ಲಿ ಕಾಣಿಸಿಕೊಳ್ಳುತ್ತಿರುವ ರೋಗಗಳ ಬಗ್ಗೆ ವೈದ್ಯರ ತಂಡ ಅಧ್ಯಯನ ನಡೆಸಿದಾಗ ಆಘಾತಕಾರಿ ಸಂಗತಿಗಳು ಹೊರ ಬಿದ್ದಿವೆ. ಇಂದಿನ ದಿನಗಳಲ್ಲಿ ದೈಹಿಕ ಚಟುವಟಿಕೆ ರಹಿತ ಮಕ್ಕಳ ಜೀವನ, ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಬಾಲ್ಯಾವ್ಯವಸ್ಥೆಯಲ್ಲಿಯೇ ಮಕ್ಕಳು ನಾನಾ ಕಾಯಿಲೆಗಳ ಸಮೀಪ ಇರುವ ಅಂಶ ಈ ಅಧ್ಯಯನದಲ್ಲಿ ಬಹಿರಂಗವಾಗಿದೆ.

ಅಧ್ಯಯನ ವರದಿಯ ಫಲಿತಾಂಶ: ಅಧ್ಯಯನಕ್ಕೆ ಒಳಪಟ್ಟ 30 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾನೆ. ನಾಲ್ಕು ವಿದ್ಯಾರ್ಥಿಗಳು ಹೈಪರ್‌ಟೆನ್ಷನ್ ನಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಐದು ವಿದ್ಯಾರ್ಥಿಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಇರುವುದು ಪತ್ತೆಯಾಗಿದ್ದು, ಟ್ರೈಗ್ಲೀಸೆರೈಡ್ ಕೊಬ್ಬಿನಾಂಶ 11 ವಿದ್ಯಾರ್ಥಿಗಳಲ್ಲಿ ಹೆಚ್ಚಳ ಇರುವುದು ಕಂಡು ಬಂದಿದೆ. ಅದರಲ್ಲಿ ಒಬ್ಬ ವಿದ್ಯಾರ್ಥಿ ಅಪಾಯಕಾರಿ ಹಂತ (499 Mg/DL) ಇರುವುದು ಬೆಳಕಿಗೆ ಬಂದಿದೆ. ಪಾರ್ಶವಾಯು ಮತ್ತು ಹೃದಯಾಘಾತಕ್ಕೆ ಕಾರಣವಾಗುವ LDL ಕೊಬ್ಬಿನಾಂಶ ಐದು ವಿದ್ಯಾರ್ಥಿಗಳಲ್ಲಿ ಅಧಿಕ ಇರುವುದು ಅಧ್ಯಯನದಿಂದ ಪತ್ತೆಯಾಗಿದೆ.

ಅಧ್ಯಯನಕ್ಕೆ ಒಳಪಟ್ಟ 30 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳಲ್ಲಿ ಹೋಮೋಸಿಸ್ಟೀನ್ ಹೆಚ್ಚಳ ಕಂಡು ಬಂದಿದ್ದು, ಇದು ವ್ಯಕ್ತಿಯ ದೇಹದಲ್ಲಿ ವಿಟಮಿನ್ ಕಡಿಮೆಯಿರುವುದನ್ನುಸೂಚಿಸುತ್ತದೆ. ಅಂದರೆ ಅಧ್ಯಯನಕ್ಕೆ ಒಳಪಟ್ಟ ಬಹುತೇಕ ವಿದ್ಯಾರ್ಥಿಗಳು ವಿಟಮಿನ್ ಕೊರತೆಯಿಂದ ಬಳಲುತ್ತಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ನಾಲ್ಕು ವಿದ್ಯಾರ್ಥಿಗಳಲ್ಲಿ ಲಿಪೋಪ್ರೋಟೀನ್ ಕಂಡು ಬಂದಿದ್ದು, ಇದು ಸಹ ಕೆಟ್ಟ ಕೊಲೆಸ್ಟ್ರಾಲ್ ಮಾದರಿಯ ಒಂದು ಕೊಬ್ಬಿನಾಂಶವಾಗಿದ್ದು, ಹೃದಯಘಾತ, ಸ್ಟ್ರೋಕ್ ಮತ್ತು ಹೃದಯ ಸಂಬಂಧಿ ಕಾಯಿಲೆಗೆ ಕಾರಣವಾಗುತ್ತದೆ.

ಶೇ. 85 ರಷ್ಟು ವಿದ್ಯಾರ್ಥಿಗಳಲ್ಲಿ C-reactive protein ಹೆಚ್ಚಳವಾಗಿರುವುದು ಅಧ್ಯಯನದಲ್ಲಿ ದೃಢಪಟ್ಟಿದೆ. ಇದು ಸೋಂಕು ಮತ್ತು ಹೃದಯ ಅಪಾಯದಲ್ಲಿರುವ ಸೂಚಕವಾಗಿದ್ದು, ಶೇ. 85 ರಷ್ಟು ವಿದ್ಯಾರ್ಥಿಗಳಲ್ಲಿ C-reactive protein ಹೆಚ್ಚಳವಾಗಿರುವುದು ಅಧ್ಯಯನದಲ್ಲಿ ಪತ್ತೆಯಾಗಿರುವುದು ಅಧ್ಯಯನ ತಂಡವನ್ನೇ ಬೆಚ್ಚಿ ಬೀಳಿಸಿದೆ.

ಅಧ್ಯಯನ ತಂಡದ ಸಲಹೆ

ವಿದ್ಯಾರ್ಥಿಗಳು ಹೃದಯ ಸಂಬಂಧಿ ಕಾಯಿಲೆ, ಹೈಪರ್‌ಟೆನ್ಷನ್ ಮತ್ತಿತರ ಕಾಯಿಲೆಗಳಿಗೆ ಒಳಗಾಗುತ್ತಿರುವುದು ಆಘಾತಕಾರಿ ಸಂಗತಿ. ವಿದ್ಯಾರ್ಥಿಗಳ ಜೀವನ ಶೈಲಿ ಬದಲಾವಣೆ, ನಿರಂತರ ಹೃದಯ ತಪಾಸಣೆಗೆ ಶಾಲಾ ಆರೋಗ್ಯ ಕಾರ್ಯಕ್ರಮದಲ್ಲಿ ಅನುಷ್ಠಾನಗೊಳಿಸುವ ತುರ್ತು ಅಗತ್ಯವಿದೆ. ಈ ಬಗ್ಗೆ ಸಾರ್ವಜನಿಕ ಆರೋಗ್ಯ ಸುಧಾರಣೆ ಕ್ರಮ ಕೈಗೊಳ್ಳಬೇಕಿದೆ ಎಂದು ಅಧ್ಯಯನ ತಂಡದಲ್ಲಿದ್ದ ಡಾ. ಮಂಜುನಾಥ್ ನೇಕಾರ್ ಅವರು ತಿಳಿಸಿದ್ದಾರೆ.

ಇನ್ನೂ ವಿಷನ್ ಗ್ರೂಪ್ ಆನ್ ಬಯೋಟೆಕ್ನಾಲಜಿಯ ಸದಸ್ಯರಾದಂತ ಪ್ರೊ.ಡಾ.ಯುಎಸ್ ವಿಶಾಲ್ ರಾವ್ ಅವರು, ಶಾಲಾ ಮಕ್ಕಳ ಅರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಧ್ಯಯನ ನಡೆಸಿದ ಕಿಮ್ಸ್ ವೈದ್ಯರ ತಂಡಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಮಕ್ಕಳ ಆರೋಗ್ಯ ರಕ್ಷಣೆ ಮಾಡುವುದು ಪೋಷಕರ ಮತ್ತು ಮತ್ತು ಸರ್ಕಾರದ ಆದ್ಯ ಕರ್ತವ್ಯ. ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆ, ಹೈಪರ್ ಟೆನ್ಷನ್ ಕಾಣಿಸಿಕೊಂಡಿರುವುದು ಎಚ್ಚರಿಕೆಯ ಗಂಟೆ. ಮಕ್ಕಳಿಗೆ ನಿರಂತರವಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವ, ಅವರಿಗೆ ಆರಂಭದಿಂದಲೇ ಉತ್ತಮ ಜೀವನ ಶೈಲಿ ರೂಢಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕಾದ ತುರ್ತು ಅಗತ್ಯವಿದೆ. ಮಕ್ಕಳ ಆರೋಗ್ಯ ರಕ್ಷಣೆಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸುವ ಅಗತ್ಯತೆಯನ್ನು ಈ ಅಧ್ಯಯನ ವರದಿ ಸೂಚಿಸುತ್ತದೆ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಹೊಸ ಬಟ್ಟೆಗಳನ್ನು ತೊಳೆಯದೆ ಧರಿಸುತ್ತಿದ್ದೀರಾ? ಹಾಗಿದ್ದರೆ ಈ ಅಪಾಯಗಳನ್ನು ತಪ್ಪದೇ ತಿಳಿಯಿರಿ!

1 Min Read

ಹೆರಿಗೆಯ ನಂತರದ ರಕ್ತದೊತ್ತಡ ಚಿಕಿತ್ಸೆಯು ದೀರ್ಘಾವಧಿಯ ಹೃದಯಾಘಾತ ಸೂಚಿಸಬಹುದು : ಅಧ್ಯಯನ

2 Mins Read

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತದೆಯೇ? ಅಸಲಿ ಸತ್ಯ ಬಹಿರಂಗ

2 Mins Read
Recent News

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

State News
KARNATAKA

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

By kannadanewsnow05 KARNATAKA 1 Min Read

ಕಾರವಾರ : ಕಾರವಾರದಲ್ಲಿ ಘೋರ ಘಟನೆ ನಡೆದಿದ್ದು, ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ…

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.