ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದರಿಂದ ಮನನೊಂದು ನನ್ನ ಸಾವಿಗೆ ಆಕೆಯೇ ಕಾರಣ ಎಂದು ಲೈವ್ ವಿಡಿಯೋ ಮಾಡಿ ಹರಿಬಿಟ್ಟು, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಸಂತೋಷ್ (24) ಎಂದು ತಿಳಿದುಬಂದಿದೆ. ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಆಕೆಯು ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡಿದ್ದನ್ನು ಸಂತೋಷ್ ಪ್ರಶ್ನಿಸಿದ್ದ. ಈ ಕಾರಣಕ್ಕೆ ಯುವತಿಯು ಸಂತೋಷ್ನಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.
ಇದರಿಂದ ಮನನೊಂದ ಸಂತೋಷ್, ನನ್ನ ಸಾವಿಗೆ ಆಕೆಯೇ ಕಾರಣ. ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ಗೆ ತಮ್ಮಿಬ್ಬರ ಫೋಟೋ ಹಾಕಿದ್ದ. ಬಳಿಕ ಸಂತೋಷ್, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನಾ ಸಂಬಂಧ ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ