Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ
KARNATAKA

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

By kannadanewsnow0902/07/2025 9:42 PM

ಚಿತ್ರದುರ್ಗ : ವಿಶ್ವಕ್ಕೆ ಮಾದರಿಯಾದ ವಚನ ಸಾಹಿತ್ಯದ ಸಂಶೋಧನೆಗೆ ಡಾ.ಫ.ಗು.ಹಳಕಟ್ಟಿ ಜೀವನವನ್ನೇ ಮುಡುಪಿಟ್ಟರು. ಲಾಭ ತರುವ ವಕೀಲಿ ವೃತ್ತಿಯನ್ನು ಬಿಟ್ಟು, ಸತತ 60 ವರ್ಷಗಳ ಕಾಲ ವಚನ ಸಂಶೋಧನೆ ಹಾಗೂ ಪ್ರಕಟಣೆ ಕಾರ್ಯಕೈಗೊಂಡು 250ಕ್ಕೂ ಅಧಿಕ ವಚನಕಾರರನ್ನು ನಾಡಿಗೆ ಪರಿಚಯಿಸಿಕೊಟ್ಟರು ಎಂದು ಭರಮಸಾಗರ ಬಾಪೂಜಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಡಾ.ಎನ್.ಮಮತಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ, ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ಅಂಗವಾಗಿ ಆಯೋಜಿಸಲಾಗಿದ್ದ, ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಚನ ಸಾಹಿತ್ಯವನ್ನು ಪುನರುಜ್ಜೀವನಗೊಳಿಸಲು ಜನ್ಮಿಸಿದ ಕಾರಣೀಭೂತ ಡಾ. ಫ.ಗು.ಹಳಹಟ್ಟಿಯವರನ್ನು ಸಾಹಿತಿ ಸಿಂಪಗೆ ಲಿಂಗಣ್ಣ ‘ಕರ್ನಾಟಕದ ಮ್ಯಾಕ್ಸ್ಮುಲ್ಲರ್’ ಎಂದು ಕರೆದಿದ್ದಾರೆ. ಸಾಹಿತಿ ಬಿ.ಎಂ.ಶ್ರೀಕಂಠಯ್ಯನವರು ‘ವಚನಗುಮ್ಮಟ’ ಎಂದು ಹೊಗಳಿದ್ದಾರೆ. ಉತ್ತರ ಕರ್ನಾಟಕದ ಮನೆಗಳಲ್ಲಿ ದೇವರ ಜಗಲಿಯಲ್ಲಿ ಪೂಜೆಗೆ ಇರಿಸಿದ್ದ ವಚನ ಸಾಹಿತ್ಯದ ತಾಳೆಗರಿಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅಧ್ಯಯನ ಮಾಡಿ ವಚನಗಳನ್ನು ಪ್ರಕಟಿಸಿ, ವಚನಕಾರರ ಚಿಂತನೆಯನ್ನು ಜಗತ್ತಿಗೆ ತೊರರ್ಪಡಿಸಿದರು. 12 ಶತಮಾನದ ವಚನ ಕ್ರಾಂತಿ ‘ವಿಶ್ವಕ್ಕೆ ಮಾದರಿಯಾದ ಸಾಮಾಜಿಕ ಕ್ರಾಂತಿ’ಯಾಗಿದೆ. ಇದನ್ನು ಜಗತ್ತಿಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿಯವರನ್ನು ‘ವಚನ ಸಾಹಿತ್ಯ ಪಿತಾಮಹ’ ಎಂದು ಕರೆಯಲಾಗುತ್ತದೆ ಎಂದರು.

ಡಾ.ಫ.ಗು.ಹಳಕಟ್ಟಿ ಅವರು ಎಂದಿಗೂ ಹಣ ಹಾಗೂ ಸಂಪತ್ತಿಗಾಗಿ ವಚನಗಳ ಸಂಶೋಧನೆ ಕೈಗೊಳ್ಳಲಿಲ್ಲ. ಅವರ ಮಗ ಅಪಘಾತಕ್ಕೆ ತುತ್ತಾಗಿ ಮರಣ ಹೊಂದಿದರು, ಧೃತಿಗೆಡದೆ ವಚನ ಸಂಶೋಧನೆಯನ್ನು ಮುಂದುವರಿಸಿದರು. ಇವರ ವ್ಯಕ್ತಿತ್ವ ನಾಡಿಗೆ ಮಾದರಿಯಾಗಿದೆ. ದುರ್ಧೈವದ ಸಂಗತಿಯAದರೆ, ಡಾ.ಫ.ಗು.ಹಳಕಟ್ಟಿ ಜೀವಿತ ಕಾಲದಲ್ಲಿ ಅವರ ಕಾರ್ಯವನ್ನು ಜನರು ಹೆಚ್ಚಾಗಿ ಗುರುತಿಸಲಿಲ್ಲ. ಆದರೆ ವಿಜಯಪುರದಲ್ಲಿ ವಾಸವಿದ್ದ ಡಾ.ಫ.ಗು.ಹಳಕಟ್ಟಿಯವರ ಮನೆಗೆ ಅಂದಿನ ರಾಜ್ಯಪಾಲರಾದ ಜಯಚಾಮರಾಜೇಂದ್ರ ಒಡೆಯರ್ ಭೇಟಿ ನೀಡಿ ಗೌರವಿಸಿದರು. ಮಠಗಳು ಡಾ.ಫ.ಗು.ಹಳಕಟ್ಟಿಯವರನ್ನು ಸ್ಮರಿಸುವ ಕೆಲಸ ಮಾಡಬೇಕು. ಇಂದಿನ ಪೀಳಿಗೆಗೆ ಅವರ ಕೊಡುಗೆ ಮತ್ತು ವ್ಯಕ್ತಿತ್ವದ ಪರಿಚಯ ಮಾಡಿಕೊಡಬೇಕು ಎಂದು ಪ್ರಾಂಶುಪಾಲೆ ಡಾ.ಎನ್.ಮಮತಾ ಹೇಳಿದರು.

ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಮಾತನಾಡಿ, ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ. ವಚನ ಸಾಹಿತ್ಯ ಮತ್ತು ವಚನಕಾರರ ಬಗ್ಗೆ ಅಮೂಲಾಗ್ರವಾಗಿ ತಿಳಿಯಲು ಡಾ.ಫ.ಗು.ಹಳಕಟ್ಟಿ ಅವರಿಂದ ಸಾಧ್ಯವಾಗಿದೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯದ ಮೂಲ ಪ್ರತಿಗಳ ಸಂಗ್ರಹಕ್ಕೆ ಮನೆ ಮನೆಗಳಿಗೆ ಸೈಕಲ್ ಮೂಲಕ ತೆರಳಿ, ಹುಡುಕಿ, ಸಂಗ್ರಹಿಸಿ ವಚನ ಸಾಹಿತ್ಯದ ಬೆಳಕು ಹರಡಿದ್ದಾರೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ಫ.ಗು.ಹಳಕಟ್ಟಿಯವರು ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದರು. ವಚನ ಸಂಶೋಧನೆ ಜೊತೆಗೆ ನಿಸ್ವಾರ್ಥ ಜನಸೇವೆಯನ್ನು ಮಾಡಿದರು. ಆಕಸ್ಮಿಕವಾಗಿ ದೊರೆತ ವಚನಗಳ ಗಂಟು ಮುಂದೆ ಫ.ಗು.ಹಳಕಟ್ಟಿಯವರ ಜೀವನದ ಮುಖ್ಯ ಉದ್ದೇಶವಾಯಿತು. ಈ ಆಕಸ್ಮಿಕ ಘಟನೆಯ ಹಿಂದೆ ದೇವರ ಇಚ್ಚೆಯಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಡಾ.ಫ.ಗು ಹಳಕಟ್ಟಿಯವರು ವಿಧಾನ ಪರಿಷತ್ ಸದಸ್ಯರಾಗಿ, ವಕೀಲರಾಗಿ, ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ಇಂತಹ ಮಹನೀಯರ ಸ್ಮರಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಉಪವಿಭಾಗಾಧಿಕಾರಿಗಳ ಕಚೇರಿ ತಹಶೀಲ್ದಾರ್ ನರಸಿಂಹಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮಳಲಿ ಶ್ರೀನಿವಾಸ್, ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್ ಕಾರ್ಯದರ್ಶಿ ಷಣ್ಮುಖಪ್ಪ, ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ್, ಸಾಹಿತಿ ಆನಂದ ಮೂರ್ತಿ ಸೇರಿದಂತೆ ಮತ್ತಿತರರು ಇದ್ದರು. ಶಿಕ್ಷಕಿ ಗೀತಾ ಭರಮಸಾಗರ ನಿರೂಪಿಸಿದರು.

ಬೆಂಗಳೂರು-ಚಿಕ್ಕಮಗಳೂರು ಹೆದ್ದಾರಿಯಲ್ಲಿ 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ: ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM1 Min Read

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM2 Mins Read

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM1 Min Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM

ಬೆಂಗಳೂರು-ಚಿಕ್ಕಮಗಳೂರು ಹೆದ್ದಾರಿಯಲ್ಲಿ 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ: ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

02/07/2025 9:30 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

By kannadanewsnow0902/07/2025 9:49 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನಾಳೆಯೂ ಮಳೆಯಾಗು ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ…

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.