Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

09/09/2025 5:30 AM

ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಹಾನಿ, 111 ಮಂದಿ ಸಾವು : CM ಸಿದ್ದರಾಮಯ್ಯ ಮಾಹಿತಿ

09/09/2025 5:30 AM

ಮನೆಯಲ್ಲಿರುವ ಹಲ್ಲಿ, ಜಿರಳೆ ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 5:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯ : ಸಾಲುಸಾಲು ಸಾವಿನ ಬೆನ್ನಲ್ಲೇ ಸರ್ಕಾರ ಘೋಷಣೆ.!
KARNATAKA

BIG NEWS : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯ : ಸಾಲುಸಾಲು ಸಾವಿನ ಬೆನ್ನಲ್ಲೇ ಸರ್ಕಾರ ಘೋಷಣೆ.!

By kannadanewsnow5708/07/2025 5:25 AM

ಬೆಂಗಳೂರು: ಆಸ್ಪತ್ರೆಯ ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ. ಆದರೆ ಈ ಲಸಿಕೆಯನ್ನು ನಮ್ಮ ದೇಶದಲ್ಲಿ ಯಾರು ಪಡೆದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೊಬೈಲ್, ಸಿಸ್ಟಮ್ ಗಳ ಸ್ಕ್ರೀನ್ ಮುಂದೆ ಮಿತಿಮೀರಿದ ಸಮಯ ಕಳೆದಿರುವುದು ಪರಿಣಾಮ ಬೀರಿದೆ. ಕೋವಿಡ್ ಸಮಯದಲ್ಲಿ ಹೃದಯಾಘಾತಗಳಾಗಿವೆ. ಆದರೆ 3 ವರ್ಷಗಳ ನಂತರ‌ ಕೋವಿಡ್ ನಿಂದ ದುಷ್ಪರಿಣಾಮ ಬೀರಿರುವುದು ಕಡಿಮೆ ಎಂದು ತಜ್ಞರು ವರದಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ 253 ಪ್ರಕರಣಗಳಲ್ಲಿ 19 ಪ್ರಕರಣಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದವು. ಆದರೆ ಶೇ 98 ರಷ್ಟು ಪ್ರಕರಣಗಳಲ್ಲಿ ಕೋವಿಡ್ ಲಸಿಕೆ ಪಡೆದವರಾಗಿದ್ದರು.‌ ಕೊವಿಡ್ ಬಂದ ಒಂದು ವರ್ಷದಲ್ಲಿ ರಕ್ತನಾಳ ಬ್ಲಾಕೇಜ್ ಆಗೋ ಸಾಧ್ಯತೆ ಇದೆ. ಆದ್ರೆ ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ತಜ್ಞರ ವರದಿಯ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನ ಆರಂಭದಲ್ಲೇ ಪತ್ತೆ ಹಚ್ಚಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಲವು ಮಹತ್ವದ ನಿರ್ಧಾರಗಳನ್ನ ಘೋಷಿಸಿದರು.

* ಸರ್ಕಾರಿ ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆ ಎಂದು ಪರಿಗಣಿಸಲು ನಿರ್ಧಾರ.

* ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳ ಡೆತ್ ಸರ್ಟಿಫಿಕೇಟ್ ಪಡೆಯಲು ಮರಣೋತ್ತರ ಪರೀಕ್ಷೆ ಕಡ್ಡಾಯ..

* 15 ವರ್ಷದ ಎಲ್ಲ ಶಾಲಾ ಮಕ್ಕಳನ್ನು ಹೃದಯ ತಪಾಸಣೆಗೆ ಒಳಪಡಿಸಲು ಪ್ಲಾನ್.

* ಪಠ್ಯ ಪುಸ್ತಕದಲ್ಲಿ ಶಾಲಾ ಮಕ್ಕಳಿಗೆ ಅಸಾಂಕ್ರಾಮಿಕ ರೋಗ, ಹೃದಯ circular ಅಳವಡಿಸಲು ಶಿಕ್ಷಣ ಇಲಾಖೆಗೆ ಮಾಹಿತಿ ಕಳುಹಿಸಲಾಗಿದೆ.

* ಹಠಾತ್ ಹೃದಯಘಾತಗಳ ಸಂದರ್ಭದಲ್ಲಿ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತಿರುವ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ.

* ಬಸ್ ಸ್ಟಾಂಡ್, ರೈಲ್ವೇ ನಿಲ್ದಾಣಗಳಲ್ಲಿ ಸ್ವಯಂ ಚಾಲಿತ AED ಯಂತ್ರಗಳನ್ನ ಇಡಲು ನಿರ್ಧಾರ. ಸಾರ್ವಜನಿಕರಿಗೆ ಸಿಪಿಆರ್ ತರಬೇತಿ ನೀಡಲು‌ ಯೋಜನೆ.

* ಸರ್ಕಾರ ಮಟ್ಟದಲ್ಲಿ ಸರ್ಕಾರಿ‌ ನೌಕಕರಿಗೆ, ಗುತ್ತಿಗೆ ನೌಕರರಿಗೆ ಹೃದಯ ತಪಾಸಣೆ, ಎ6 ಸ್ಕ್ರೀನಿಂಗ್ ಮಾಡಲು ನಿರ್ಧರಿಸಿದ್ದೇವೆ

* ಖಾಸಗಿ ಕಂಪನಿಗಳು, ಉದ್ದಿಮೆದಾರರು ತಮ್ಮ ಕಂಪನಿಗಳಲ್ಲಿ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ನಡೆಸಲು ಸಲಹೆ

BIG NEWS: Postmortem examinations of heart attack victims in the state are mandatory: Government announcement in the wake of a string of deaths!
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

09/09/2025 5:30 AM1 Min Read

ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಹಾನಿ, 111 ಮಂದಿ ಸಾವು : CM ಸಿದ್ದರಾಮಯ್ಯ ಮಾಹಿತಿ

09/09/2025 5:30 AM2 Mins Read

ಸಿಇಟಿ: ಇಂದು ಬೆಳಗ್ಗೆ 8 ಗಂಟೆಯವರೆಗೆ ಆಪ್ಷನ್ ದಾಖಲಿಸಲು ಸಮಯ ವಿಸ್ತರಣೆ

09/09/2025 5:16 AM1 Min Read
Recent News

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

09/09/2025 5:30 AM

ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಹಾನಿ, 111 ಮಂದಿ ಸಾವು : CM ಸಿದ್ದರಾಮಯ್ಯ ಮಾಹಿತಿ

09/09/2025 5:30 AM

ಮನೆಯಲ್ಲಿರುವ ಹಲ್ಲಿ, ಜಿರಳೆ ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 5:20 AM

ಸಿಇಟಿ: ಇಂದು ಬೆಳಗ್ಗೆ 8 ಗಂಟೆಯವರೆಗೆ ಆಪ್ಷನ್ ದಾಖಲಿಸಲು ಸಮಯ ವಿಸ್ತರಣೆ

09/09/2025 5:16 AM
State News
KARNATAKA

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

By kannadanewsnow0909/09/2025 5:30 AM KARNATAKA 1 Min Read

ಬೆಂಗಳೂರು: ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇ-ಸ್ವತ್ತು ಜಾರಿಗೆ ತರಲು ಪೂರ್ವಭಾವಿಯಾಗಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌…

ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಹಾನಿ, 111 ಮಂದಿ ಸಾವು : CM ಸಿದ್ದರಾಮಯ್ಯ ಮಾಹಿತಿ

09/09/2025 5:30 AM

ಸಿಇಟಿ: ಇಂದು ಬೆಳಗ್ಗೆ 8 ಗಂಟೆಯವರೆಗೆ ಆಪ್ಷನ್ ದಾಖಲಿಸಲು ಸಮಯ ವಿಸ್ತರಣೆ

09/09/2025 5:16 AM

ಇಲ್ಲಿ ನಿಮ್ಮ ಉಗುರು ಕತ್ತರಿಸಿ ಹಾಕಿ, ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿ ದೂರ

09/09/2025 5:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.