Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭ ; ಭರ್ಜರಿ ಸಿದ್ಧತೆ

24/11/2025 10:16 PM

BREAKING ; ಜಪಾನ್ ಪ್ರಧಾನಿ ಹೇಳಿಕೆ ಬಳಿಕ ಟ್ರಂಪ್, ಕ್ಸಿ ತೈವಾನ್ ಜೊತೆ ದೂರವಾಣಿ ಸಂಭಾಷಣೆ ; ವ್ಯಾಪಾರ, ಉಕ್ರೇನ್ ಬಗ್ಗೆಯೂ ಚರ್ಚೆ

24/11/2025 9:56 PM

ಪಿಜಿ ಮೆಡಿಕಲ್: ಪರಿಶಿಷ್ಟ ಜಾತಿ ಒಳಮೀಸಲಾತಿ ದಾಖಲೆ ಸಲ್ಲಿಸಲು KEA ಸಲಹೆ

24/11/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 11 ತಿಂಗಳಲ್ಲಿ 12,500 ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ
KARNATAKA

BIG NEWS : ರಾಜ್ಯದಲ್ಲಿ 11 ತಿಂಗಳಲ್ಲಿ 12,500 ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

By kannadanewsnow5708/07/2025 6:39 AM

ಕೊಪ್ಪಳ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಅವರು ಸೋಮವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿನ ನೂತನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ರಾಜ್ಯ ಸರ್ಕಾರ ಮತ್ತು ಅಜೀಮ್ ಪ್ರೇಮಜಿ ಫೌಂಡೇಶನ್ ಸಹಯೋಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ಮತ್ತು ಬಾಳೆ ಹಣ್ಣುಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಜೊತೆಗೆ ಮಕ್ಕಳಿಗೆ ಬಿಸಿಊಟ, ಹಾಲು, ಪಠ್ಯ ಪುಸ್ತಕ, ಸಮವಸ್ತ್ರದೊಂದಿಗೆ ಶೂಗಳು ಮತ್ತು ಸಾಕ್ಸ್ ಹಾಗೂ ವಿಶೇಷವಾಗಿ ಮಕ್ಕಳ ಪೌಷ್ಠಿಕ ಬೆಳವಣಿಗೆಗೆ ರಾಗಿ ಮಾಲ್ಟ್ ಕೊಡಲಾಗುತ್ತಿದೆ. ಒಂದು ಸಮೀಕ್ಷಾ ವರದಿ ಪ್ರಕಾರ ರಾಜ್ಯದಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಮಕ್ಕಳ ಪೌಷ್ಠಿಕತೆ ಉನ್ನತ ಸ್ಥಾನವನ್ನು ಪಡೆದಿದೆ. ಉತ್ತಮ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿದ್ದು, ಇಲ್ಲಿ ಓದುವ ಮಕ್ಕಳೆಲ್ಲ ಪುಣ್ಯವಂತರು. ಸರ್ಕಾರಿ ಶಾಲೆಗಳಲ್ಲಿ ಓದಿದವರೆಲ್ಲ ಉನ್ನತ ಸ್ಥಾನಗಳಲ್ಲಿದ್ದಾರೆ. ಇಂದಿನ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಹ ಓದಿರುವುದು ಒಂದು ಸರ್ಕಾರಿ ಶಾಲೆಯಲ್ಲಿಯೆ. ಸರ್ಕಾರಿ ಶಾಲೆಗಳ ಮಕ್ಕಳು ಚೆನ್ನಾಗಿ ಓದಿ ಬುದ್ದಿವಂತರಾಗಬೇಕು. ನಮ್ಮ ಸರ್ಕಾರ ಬಂದ ನಂತರ ಕೇವಲ 11 ತಿಂಗಳಲ್ಲಿ 12,500 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಹಂತ ಹಂತವಾಗಿ ಶಿಕ್ಷಕರ ಕೊರತೆಯನ್ನು ನೀಗಿಸಲಾಗುವುದು. ಮಕ್ಕಳ ಭವಿಷ್ಯಕ್ಕಾಗಿ ಬೇಕಾಗುವ ಶಿಕ್ಷಣದ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂದರು.

ಮಕ್ಕಳ ಸೇವೆ ಮಾಡಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನನಗೆ ಶಿಕ್ಷಣ ಇಲಾಖೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಕೆ.ಪಿ.ಎಸ್. ಶಾಲೆಗಳನ್ನು ಪ್ರಾರಂಭಿಸಲಿದ್ದೇವೆ ಹಾಗೂ ಅವಶ್ಯವಿರುವಲ್ಲಿ ಹೈಸ್ಕೂಲ್ ಮತ್ತು ಪಿಯುಸಿ ಕಾಲೇಜುಗಳನ್ನು ಮಾಡಿಕೊಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುಧಾನದಲ್ಲಿ ಶೇ. 25ರಷ್ಟನ್ನು ಶಿಕ್ಷಣಕ್ಕಾಗಿಯೇ ಮೀಸಲಿಡಲಾಗಿದೆ. ಪರೀಕ್ಷೆಯಲ್ಲಿ ಕಾಪಿ ಮಾಡುವುದನ್ನು ತಡೆಯಲು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಇದರಿಂದ ಕೆಲ ಮಕ್ಕಳು ಪೇಲ್ ಆಗುತ್ತಿರಬಹುದು. ಆದರೆ, ಭವಿಷ್ಯದಲ್ಲಿ ಮಕ್ಕಳು ಯಾವುದೇ ರೀತಿಯಲ್ಲಿ ಸೋಲುವುದಿಲ್ಲ. ಮೂರು ಪರೀಕ್ಷಾ ಸೂತ್ರವನ್ನು ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಯ ಮಹತ್ವವು ಮುಂಬರುವ ದಿನಗಳಲ್ಲಿ ತಿಳಿಯಲಿದೆ. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಮಕ್ಕಳಲ್ಲಿ 84,400 ಕ್ಕಿಂತಲು ಹೆಚ್ಚು ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿ ಶಿಕ್ಷಣ ಇಲಾಖೆಯ ಗೌರವನ್ನು ಹೆಚ್ಚಿಸಿದ್ದಾರೆ. ಇದರಲ್ಲಿ ಸರ್ಕಾರಿ ಶಾಲೆಗಳು ಮೊದಲ ಸ್ಥಾನದಲ್ಲಿದ್ದು, ಅನುದಾನಿತ ಮತ್ತು ಖಾಸಗಿ ಶಾಲೆಗಳು 2ನೇ ಮತ್ತು 3ನೇ ಸ್ಥಾನದಲ್ಲಿವೆ. ಸದ್ಯ 3ನೇ ಪರೀಕ್ಷೆಯು ನಡೆಯುತ್ತಿದೆ ಎಂದು ಹೇಳಿದರು.
ಇಡೀ ರಾಜ್ಯದಾದ್ಯಂತ ರೈತರ ಹೊಲಗಳು ಹಸಿರಾಗಿವೆ ಎಂಬುವುದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು 36 ರಿಂದ 37 ಲಕ್ಷ ಬೋರ್ವೆಲ್‌ಗಳಿಗೆ ಉಚಿತ ವಿದ್ಯುತ್ ನೀಡಿ, ಆರ್ಥಿಕವಾಗಿ ದುಡಿಯುವ ರೈತರ ಕೈಗಳಿಗೆ ಶಕ್ತಿ ನೀಡಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ಮಾಡುವುದರ ಮೂಲಕ ಪ್ರತಿಯೊಂದು ಮನೆಗೆ ಉಚಿತ ಬೆಳಕನ್ನು ನೀಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ್ದು, ಹಲವಾರು ಜನಪರವಾದ ಕಾರ್ಯಕ್ರಮಗಳನ್ನು ಜಾರಿಗೆ ಮಾಡಲಾಗಿದೆ. ವಿಶೇಷವಾಗಿ ನಮ್ಮ ಯಲಬುರ್ಗಾ ಕ್ಷೇತ್ರದಲ್ಲಿ 16 ಹೊಸ ಶಾಲೆಗಳು ಮತ್ತು 7 ಹೊಸ ಜೂನಿಯರ್ ಕಾಲೇಜುಗಳು ಪ್ರಾರಂಭವಾಗಿದ್ದು, ಇನ್ನೊಂದು ವಾರದಲ್ಲಿ ತಲಾ ಒಂದು ಹೊಸ ಹೈಸ್ಕೂಲ್ ಮತ್ತು ಜೂನಿಯರ್ ಕಾಲೇಜು ಪ್ರಾರಂಭವಾಗಲಿದೆ. ಇದರ ಜೊತೆಗೆ ವಿವಿಧ ಗ್ರಾಮಗಳಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳನ್ನು ಸಹ ಮಂಜೂರು ಮಾಡಿಸಲಾಗಿದೆ. ಬ್ರಿಜ್ ಕಂ ಬ್ಯಾರೆಜ್ ನಿರ್ಮಾಣ, ಕೆರೆ ತುಂಬಿಸಲು ಸಹ ಅನುದಾನವನ್ನು ನೀಡಲಾಗಿದೆ. ಒಂದು ಶಾಲೆ ಪ್ರಾರಂಭಿಸಿದ ಬಳಿಕ ಶಾಲಾ ಮುಖ್ಯಗುರುಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ವೇತನ ಸೇರಿದಂತೆ ಒಂದು ವರ್ಷಕ್ಕೆ ಸುಮಾರು 70 ರಿಂದ 75 ಲಕ್ಷಗಳು ಖರ್ಚಾಗಲಿದ್ದು, ಈ ಅನುದಾನವನ್ನು ಸರ್ಕಾರವು ನೀಡಲಿದೆ ಎಂದರು.

ಮಧು ಬಂಗಾರಪ್ಪ ಶಿಕ್ಷಣ ಮಂತ್ರಿಗಳಾದ ನಂತರ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಾಲೆಗಳು ಬೇಕೆಂದು ಬಹಳಷ್ಟು ಜನರು ಒತ್ತಾಯ ಮಾಡುತ್ತಿದ್ದಾರೆ. ಎಲ್.ಕೆ.ಜಿ ಯಿಂದ ಪಿ.ಯುಸಿ ವರೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಮಾಡಲು ಸಚಿವರು ಬಹಳಷ್ಟು ಆಸಕ್ತಿ ವಹಿಸಿದ್ದಾರೆ. ಸರ್ಕಾರದಿಂದ 500 ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಇದರ ಜೊತೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಯಡಿ 50 ಶಾಲೆಗಳನ್ನು ಮಂಜೂರು ಮಾಡಿದ್ದು, ಇದೊಂದು ಐತಿಹಾಸಿಕ ದಾಖಲೆಯಾಗಲಿದೆ. ಪ್ರತಿ ಶಾಸಕರ ಕ್ಷೇತ್ರಕ್ಕೆ 3 ಶಾಲೆಗಳನ್ನು ನೀಡುವುದಾಗಿ ಸಚಿವರು ತಿಳಿಸಿದ್ದು, ನಮ್ಮ ಯಲಬುರ್ಗಾ ಕ್ಷೇತ್ರಕ್ಕೆ 4 ಕೆ.ಪಿ.ಎಸ್ ಶಾಲೆಗಳನ್ನು ನೀಡುವಂತೆ ನಾನು ಕೇಳಿದ್ದೇನೆ. ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಗುನ್ನಾಳ ಮತ್ತು ಬಿನ್ನಾಳ ಗ್ರಾಮಗಳಲ್ಲಿ ಒಂದೊಂದು ಸೇರಿ ನಮ್ಮ ಕ್ಷೇತ್ರದಲ್ಲಿ ಒಟ್ಟು 6 ಕೆ.ಪಿ.ಎಸ್ ಶಾಲೆಗಳು ಮಂಜೂರಾಗಲಿವೆ. ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ. ಶಿಕ್ಷಣಕ್ಕಾಗಿಯೇ ನಮ್ಮ ಸರ್ಕಾರವು ಬಜೆಟ್‌ನಲ್ಲಿ ರೂ. 42 ಸಾವಿರ ಕೋಟಿ ಅನುದಾನವನ್ನು ಮೀಸಲಿರಿಸಿದೆ ಎಂದು ಹೇಳಿದರು.

BIG NEWS: 12500 teachers to be recruited in the state in 11 months: Education Minister Madhu Bangarappa
Share. Facebook Twitter LinkedIn WhatsApp Email

Related Posts

ಪಿಜಿ ಮೆಡಿಕಲ್: ಪರಿಶಿಷ್ಟ ಜಾತಿ ಒಳಮೀಸಲಾತಿ ದಾಖಲೆ ಸಲ್ಲಿಸಲು KEA ಸಲಹೆ

24/11/2025 9:55 PM1 Min Read

KUWJ ನೂತನ ಪದಾಧಿಕಾರಿಗಳು ಪದಗ್ರಹಣ: ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅತ್ಯಗತ್ಯವೆಂದ ಸಚಿವ ಈಶ್ವರ ಖಂಡ್ರೆ

24/11/2025 8:52 PM2 Mins Read

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

24/11/2025 8:44 PM3 Mins Read
Recent News

ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭ ; ಭರ್ಜರಿ ಸಿದ್ಧತೆ

24/11/2025 10:16 PM

BREAKING ; ಜಪಾನ್ ಪ್ರಧಾನಿ ಹೇಳಿಕೆ ಬಳಿಕ ಟ್ರಂಪ್, ಕ್ಸಿ ತೈವಾನ್ ಜೊತೆ ದೂರವಾಣಿ ಸಂಭಾಷಣೆ ; ವ್ಯಾಪಾರ, ಉಕ್ರೇನ್ ಬಗ್ಗೆಯೂ ಚರ್ಚೆ

24/11/2025 9:56 PM

ಪಿಜಿ ಮೆಡಿಕಲ್: ಪರಿಶಿಷ್ಟ ಜಾತಿ ಒಳಮೀಸಲಾತಿ ದಾಖಲೆ ಸಲ್ಲಿಸಲು KEA ಸಲಹೆ

24/11/2025 9:55 PM

ರೋಡ್ ಸೈಡಲ್ಲಿ ಸಿಗುವ ‘ಫ್ರೈಡ್ ರೈಸ್’ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತೀರಾ? ಇದು ಗೊತ್ತಾದ್ರೆ, ತಿನ್ನೋದಿರ್ಲಿ, ಅತ್ತ ತಿರುಗಿಯೂ ನೋಡಲ್ಲ

24/11/2025 9:44 PM
State News
KARNATAKA

ಪಿಜಿ ಮೆಡಿಕಲ್: ಪರಿಶಿಷ್ಟ ಜಾತಿ ಒಳಮೀಸಲಾತಿ ದಾಖಲೆ ಸಲ್ಲಿಸಲು KEA ಸಲಹೆ

By kannadanewsnow0924/11/2025 9:55 PM KARNATAKA 1 Min Read

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಲುವಾಗಿ ನಡೆದ ಮೂಲ ದಾಖಲೆಗಳ ಪರಿಶೀಲನೆ ವೇಳೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ…

KUWJ ನೂತನ ಪದಾಧಿಕಾರಿಗಳು ಪದಗ್ರಹಣ: ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅತ್ಯಗತ್ಯವೆಂದ ಸಚಿವ ಈಶ್ವರ ಖಂಡ್ರೆ

24/11/2025 8:52 PM

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

24/11/2025 8:44 PM

ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

24/11/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.