ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆಯೊಂದು ನಡೆದಿದ್ದು ದೆವ್ವ ಬಿಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ಮಹಿಳೆಗೆ ದೆವ್ವ ಸೇರಿಕೊಂಡಿದ್ದು ಅದನ್ನು ಬೀಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ್ದಾರೆ. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಜಂಬರಗಟ್ಟೆ ನಿವಾಸಿ ಗೀತಮ್ಮ (50) ಸಾವನ್ನಪ್ಪಿದ ಮಹಿಳೆ. ತಾಯಿಗೆ ಹುಷಾರಿಲ್ಲದ ಹಿನ್ನೆಲೆ ಮಗನೇ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ.
ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ. ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಶಾಂತಮ್ಮ ಎಂಬ ಮಹಿಳೆ ಗೀತಮ್ಮನಿಗೆ ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದ್ದು, ಚಿತ್ರಹಿಂಸೆ ತಾಳಲಾರದೇ ಗೀತಮ್ಮ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.