ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಡಿಸೆಮ್ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದರು.
ಆದರೆ ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಶಾಲಾ ಮಕ್ಕಳಿಗೆ ಫ್ರೀ ಬಸ್ ಪಾಸಿಗೆ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ ಅಷ್ಟೇ, ಇದು ಕೇವಲ ಸಲಹೆ ಅಷ್ಟೇ ಇದಕ್ಕೆ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಬೇಕು ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ ಶಾಲೆಯಲ್ಲಿ ಓದುವ ಹೆಣ್ಣು ಮಕ್ಕಳಿಗೆ ಈಗಾಗಲೇ ಫ್ರೀ ಇದೆ ಈ ಯೋಜನೆಗೆ 10 ಕೋಟಿ ರೂಪಾಯಿ ಹೆಚ್ಚು ಖರ್ಚು ಆಗುತ್ತದೆ ಎಂದು ತಿಳಿಸಿದರು.
ಹೆಣ್ಣು ಮಕ್ಕಳಿಗೆ ಈಗಾಗಲೇ ಉಚಿತ ಇದೆ ಗಂಡು ಮಕ್ಕಳಿಗೆ ಪಾಸ್ ಕೊಡುತ್ತೇವೆ ಸರ್ಕಾರಿ ಕೆಪಿಎಸ್ ಶಾಲೆಯಲ್ಲಿ ಉತ್ತೇಜನ ಕೊಡೋದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆ ರೀತಿ ಹೇಳಿರಬಹುದು. ಅದಕ್ಕೆ ಸುಮಾರು 10 ಕೋಟಿ ಗು ಹೆಚ್ಚು ಖರ್ಚಾಗುತ್ತದೆ ಈ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಲಹೆ ಕೊಟ್ಟಿದ್ದಾರೆ ಅಷ್ಟೇ. ಯಾವುದೇ ಯೋಜನೆ ಜಾರಿಯಾಗಬೇಕಾದರು ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿ ತೀರ್ಮಾನ ಆಗಬೇಕು ಅಂದಾಗ ಇದು ಜಾರಿಗೆ ಆಗುತ್ತದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.