ರಾಯಚೂರು : ಗಂಡ-ಹೆಂಡತಿ ನಡುವೆ ಕಿರಿಕ್ ಆಗಿದ್ದು, ಈ ವೇಳೆ ಪತಿಯನ್ನೇ ಪತ್ನಿ ನದಿಗೆ ತಳ್ಳಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.
ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಈ ಘಟನೆ ನಡೆದಿದೆ. ಪತಿ ಜೊತೆಗೆ ಬೈಕ್ ನಲ್ಲಿ ಬಂದಿದ್ದ ಪತ್ನಿ ಖತರ್ನಾಕ್ ಪ್ಲ್ಯಾನ್ ಮಾಡಿದ್ದಳು. ಬ್ರಿಡ್ಜ್ ಮೇಲೆ ಫೋಟೋ ತೆಗೆಸಿಕೊಳ್ಳೋ ರೀತಿ ನಾಟಕ ಮಾಡಿ ಬಳಿಕ ಪತಿಯನ್ನು ಬ್ರಿಡ್ಜ್ ತುದಿಗೆ ನಿಲ್ಲಿಸಿ ತಳ್ಳಿದ್ದಾಳೆ. ನದಿ ಮಧ್ಯ ಈಜಿ ಬಂಡೆಯೊಂದರ ಮೇಲೆ ಕುಳಿತ ವ್ಯಕ್ತಿ ಸಹಾಯಕ್ಕಾಗಿ ಕೂಗಿದ್ದಾರೆ.
ಆತನ ಕಿರುಚಾಟ ಕೇಳಿದ ಅಕ್ಕಪಕ್ಕದಲ್ಲಿದ್ದವರು ಆಗಮಿಸಿ ರಕ್ಷಣೆ ಮಾಡಿದ್ದಾರೆ. ಸುಮಾರು 2 ಗಂಟೆಗಳ ಕಾಲ ನದಿಯಲ್ಲಿದ್ದ ಪತಿಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ರಾಯಚೂರು ಶಕ್ತಿನಗರದ ದಂಪತಿ ನಡುವೆ ಗಲಾಟೆಯಾಗಿದ್ದು, ಪತಿಯನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದ ಪತ್ನಿ ಫೋಟೋ ತೆಗೆಯುವ ನೆಪದಲ್ಲಿ ನದಿಗೆ ನೂಕಿದ್ದಾಳೆ ಎನ್ನಲಾಗಿದೆ.