ಮೈಸೂರು : ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಕ್ರಾಂತಿ ಆಗಲಿದೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದರು ಈ ಒಂದು ಹೇಳಿಕೆಗೆ, ಕಾಂಗ್ರೆಸ್ಸಿನ ಮತ್ತೋರ್ವ ಶಾಸಕ ಸ್ಪೋಟಕ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆಯ ವಿಚಾರ ಕುರಿತು ಮಾಧ್ಯಮಗಳ ಮುಂದೆ ಮಾತನಾಡಲ್ಲ 5 ವರ್ಷ ಸುಭದ್ರ ಸರ್ಕಾರ ಕೊಡಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ ಪಕ್ಷದಿಂದ ಸರ್ಕಾರ ಬಂದಿದೆ ಸರ್ಕಾರದಿಂದ ಪಕ್ಷ ಬಂದಿಲ್ಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ ಎಂದು ತನ್ವಿರ್ ಸೇಠ್ ತಿಳಿಸಿದರು.
ನಾನು ನೂರು ವರ್ಷಗಳ ಕಾಲ ಬದುಕಬೇಕು ಅಂದುಕೊಂಡರು ನನ್ನಿಂದ ಅದು ಸಾಧ್ಯಾನಾ ಅಂತ ಯೋಚಿಸಬೇಕು ಮಾರನೆಯ ದಿನ ಬೆಳಗಿನ ಆಗುತ್ತೋ ಇಲ್ವೋ ಗೊತ್ತಿಲ್ಲ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೆ ನಮ್ಮ ಮುಖ್ಯಮಂತ್ರಿಗಳು ಅಧಿಕಾರ ಬದಲಾವಣೆಯ ಸೂತ್ರ ಗೊತ್ತಿಲ್ಲ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿದ್ದೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿಕೆ ನೀಡಿದರು.
ಡಿಸಿಎಂ ಅಡಿಕೆ ಡಿಗೆ ಶಿವಕುಮಾರ್ ಗೆ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ವಿಚಾರವಾಗಿ ಯಾರೋ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ಕೊಡ್ತಾ ಹೋದರೆ ಕೊನೆ ಇರುವುದಿಲ್ಲ.ಯಾರು ಯಾವ ಸನ್ನಿವೇಶದಲ್ಲಿ ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು. ಜನರ ಆಸೆಗಳಿಗೆ ಸ್ಪಂದಿಸುವ ಸರ್ಕಾರ ಕೊಡಿ ಅಂತ ನಾವು ಹೇಳುತ್ತೇವೆ 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಸಿದ್ದರಾಮಯ್ಯ ಅವರಿಗೆ ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದರು.
ನಾವು ಇದರ ಹೊರತು ಬೇರೆ ಇನ್ನೇನು ಹೇಳುವುದಿಲ್ಲ. ಸಂಪುಟ ಪುನಾರಚನೆ ಯಾವಾಗ ಬೇಕಾದರೂ ಆಗಬಹುದು. ಆಗುವವರೆಗೂ ಪಕ್ಷದ ಮೇಲೆ ನಂಬಿಕೆ ಇಟ್ಟು ಕಾಯುತ್ತೇನೆ. ನನಗೆ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆ ಇಟ್ಟುಕೊಂಡಿದ್ದೇನೆ ನಾನು ಸನ್ಯಾಸಿ ಅಲ್ಲ ನನ್ನ ಮೇಲೆ ಎಲ್ಲರಿಗೂ ನಿರೀಕ್ಷೆ ಇದೆ ಅವಕಾಶ ಸಿಕ್ಕಿಲ್ಲ. ಸಿಕ್ಕಾಗ ಕೆಲಸ ಮಾಡುತ್ತೇನೆ ಎಂದು ಶಾಸಕ ತನ್ವಿರ್ ಸೇಠ್ ಹೇಳಿಕೆ ನೀಡಿದರು.