ರಾಯಚೂರು: ರಾಜ್ಯದಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಯ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಾತರಕಿ ಗ್ರಾಮದಲ್ಲಿ ತಾಯಮ್ಮ(38) ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತರ ಸಂಬಂಧಿ 16 ವರ್ಷದ ಬಾಲಕಿ ಸಮಿತ್ರಾ ಗಾಯಗೊಂಡಿದ್ದಾರೆ.ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಿರಂತರ ಮಳೆಯಿಂದಾಗಿ ತಾಯಮ್ಮ ಅವರ ಹಳೆ ಮನೆ ಗೋಡೆ ತೇವಗೊಂಡು ಶಿಥಿಲವಾಗಿತ್ತು. ಮನೆ ಗೋಡೆ ಕುಸಿತಗೊಂಡು ತಾಯಮ್ಮ ಸಾವನ್ನಪ್ಪಿದ್ದು, ಬಾಲಕಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.