ಮೈಸೂರು: ಜಿಲ್ಲೆಯಲ್ಲಿ ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.
ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ.
ಮೈಸೂರಿನ ಸಾಧನಾ ಸಮಾವೇಶಕ್ಕೆ ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.