Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ತಾಲೂಕು ತಹಶೀಲ್ದಾರ್ ಆಗಿ ಪರಶುರಾಮ್ ಸತ್ತಿಗೇರಿ ಅಧಿಕಾರ ಸ್ವೀಕಾರ

19/07/2025 1:02 PM

30 ವರ್ಷಗಳ ಹಿಂದೆ ಗುತ್ತಿಗೆದಾರನ ಬಿಲ್ ಬಾಕಿ : ಕೋರ್ಟ್ ಆದೇಶದಂತೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಕಾರು ಜಪ್ತಿ

19/07/2025 12:54 PM

ವ್ಯಾಪಾರ ಒಪ್ಪಂದಕ್ಕಾಗಿ 5ನೇ ಸುತ್ತಿನ ಮಾತುಕತೆಯನ್ನು ಮುಕ್ತಾಯಗೊಳಿಸಲು US ನೊಂದಿಗೆ ಭಾರತ ಮಾತುಕತೆ

19/07/2025 12:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 30 ವರ್ಷಗಳ ಹಿಂದೆ ಗುತ್ತಿಗೆದಾರನ ಬಿಲ್ ಬಾಕಿ : ಕೋರ್ಟ್ ಆದೇಶದಂತೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಕಾರು ಜಪ್ತಿ
KARNATAKA

30 ವರ್ಷಗಳ ಹಿಂದೆ ಗುತ್ತಿಗೆದಾರನ ಬಿಲ್ ಬಾಕಿ : ಕೋರ್ಟ್ ಆದೇಶದಂತೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಕಾರು ಜಪ್ತಿ

By kannadanewsnow0519/07/2025 12:54 PM

ಬೆಳಗಾವಿ : 30 ವರ್ಷಗಳ ಹಿಂದೆ ಗುತ್ತಿಗೆದಾರನಿಗೆ ನೀಡಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಓಡಾಡ್ತಿದ್ದ ಕಾರು ಜಪ್ತಿ ಮಾಡಲಾಗಿದೆ.

1992-93ರಲ್ಲಿ ಚಿಕ್ಕೋಡಿಯ ದೂಧ್​ಗಂಗಾ ನದಿಗೆ ಅಡ್ಡಲಾಗಿ ಗುತ್ತಿಗೆದಾರ ದಿ.ನಾರಾಯಣ ಗಣೇಶ ಕಾಮತ್​ ಎಂಬವರು ಬ್ಯಾರೆಜ್ ನಿರ್ಮಾಣ ಮಾಡಿದ್ದರು. ಈ ವೇಳೆ ಬ್ಯಾರೆಜ್ ನಿರ್ಮಾಣಕ್ಕೆ ಅಗತ್ಯ ಇರುವಷ್ಟು ಸಿಮೆಂಟ್ ಪೂರೈಕೆ ಮಾಡಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವಿಳಂಬ ಮಾಡಿದ್ದರು. ಇದರಿಂದ ಗುತ್ತಿಗೆದಾರ ಕಾಮತ್​ ಅವರಿಗೆ ಬಹಳಷ್ಟು ಹಾನಿ ಆಗಿತ್ತು. ಅಲ್ಲದೇ, ಷರತ್ತುಬದ್ಧ ಗುತ್ತಿಗೆಯಲ್ಲಿ ಬಿಲ್‌ ಸಿಗದಿದ್ದಕ್ಕೆ ನೀರಾವರಿ ಇಲಾಖೆ ವಿರುದ್ಧ 1995ರಲ್ಲಿ ಗುತ್ತಿಗೆದಾರ ಕಾಮತ್​ ನ್ಯಾಯಾಲಯದ ಮೊರೆ ಹೋಗಿದ್ದರು.

ಈ ವೇಳೆ ಬೆಳಗಾವಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ 34 ಲಕ್ಷ ರೂ. ಪರಿಹಾರಕ್ಕೆ ಆದೇಶಿಸಿತ್ತು. ಸ್ಥಳೀಯ ಕೋರ್ಟ್‌ ಆದೇಶ ಪ್ರಶ್ನಿಸಿ ಸಣ್ಣ ನೀರಾವರಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ 2024ರ ಜೂನ್ ಒಳಗಾಗಿ ಗುತ್ತಿಗೆದಾರನಿಗೆ ಬಡ್ಡಿ ಸಮೇತ ಅರ್ಧ ಬಿಲ್ ಪಾವತಿ ಮಾಡುವಂತೆ ಹೈಕೋರ್ಟ್ ಕೂಡ ಸೂಚನೆ ನೀಡಿತ್ತು.

ಬಳಿಕ ಈ ಆದೇಶದ ವಿರುದ್ಧ ಸಣ್ಣ ನೀರಾವರಿ ಇಲಾಖೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಪ್ರಕರಣ ಮತ್ತೆ ಕೆಳ ಹಂತದ ನ್ಯಾಯಾಲಯಕ್ಕೆ ಬಂದಾಗ, ಗುತ್ತಿಗೆದಾರ ಕಾಮತ್ ಅವರಿಗೆ 11-8-1995ರಿಂದ ಶೇ. 9ರಷ್ಟು ಬಡ್ಡಿ ಸಮೇತ 1.31 ಕೋಟಿ ರೂ. ಪರಿಹಾರ ನೀಡುವಂತೆ 2024ರ ಜುಲೈ 31ರಂದು ಆದೇಶ ನೀಡಿತ್ತು. ಮೂರನೇ ಬಾರಿಗೆ ಮತ್ತೆ ಇದೇ ವರ್ಷ ಎಪ್ರಿಲ್​​ನಲ್ಲಿ ನ್ಯಾಯಾಲಯವು ಈ ಮೊತ್ತದ ಶೇ. 50ರಷ್ಟು ಪರಿಹಾರವನ್ನು ಜೂನ್ 2ರೊಳಗೆ ಪಾವತಿ ಮಾಡುವಂತೆ ತೀರ್ಪು ನೀಡಿತ್ತು. ಈ ಆದೇಶಕ್ಕೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ.

ನೀರಾವರಿ ಇಲಾಖೆ ಕಾರ್ಯದರ್ಶಿ, ಜಿಲ್ಲಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಅವರು ಕೂಡಲೇ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಈಗಲೂ ಸಂಬಂಧಿಸಿದ ಅಧಿಕಾರಿಗಳು ಪರಿಹಾರ ಪಾವತಿಸಲು ವಿಳಂಬ ಮಾಡಿದ್ದರಿಂದ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಪಡಿಸಿಕೊಳ್ಳಲಾಗಿದೆ ಎಂದು ನ್ಯಾಯವಾದಿ ಒ.ಬಿ. ಜೋಶಿ ಮಾಹಿತಿ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಮದ್ದೂರು ತಾಲೂಕು ತಹಶೀಲ್ದಾರ್ ಆಗಿ ಪರಶುರಾಮ್ ಸತ್ತಿಗೇರಿ ಅಧಿಕಾರ ಸ್ವೀಕಾರ

19/07/2025 1:02 PM1 Min Read

Rain Alert : ಉತ್ತರಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ : ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಡಿಸಿ ಮನವಿ

19/07/2025 12:20 PM1 Min Read

BREAKING : ಕೂಡಲಸಂಗಮ ಮಠದಿಂದ ಜಯಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಟ್ರಸ್ಟ್ ಚಿಂತನೆ : ವಿಜಯಾನಂದ ಕಾಶಪ್ಪನವರ್

19/07/2025 12:14 PM2 Mins Read
Recent News

ಮದ್ದೂರು ತಾಲೂಕು ತಹಶೀಲ್ದಾರ್ ಆಗಿ ಪರಶುರಾಮ್ ಸತ್ತಿಗೇರಿ ಅಧಿಕಾರ ಸ್ವೀಕಾರ

19/07/2025 1:02 PM

30 ವರ್ಷಗಳ ಹಿಂದೆ ಗುತ್ತಿಗೆದಾರನ ಬಿಲ್ ಬಾಕಿ : ಕೋರ್ಟ್ ಆದೇಶದಂತೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಕಾರು ಜಪ್ತಿ

19/07/2025 12:54 PM

ವ್ಯಾಪಾರ ಒಪ್ಪಂದಕ್ಕಾಗಿ 5ನೇ ಸುತ್ತಿನ ಮಾತುಕತೆಯನ್ನು ಮುಕ್ತಾಯಗೊಳಿಸಲು US ನೊಂದಿಗೆ ಭಾರತ ಮಾತುಕತೆ

19/07/2025 12:49 PM

ದಿನಕ್ಕೆ 10 ಸಾವಿರ ಹೆಜ್ಜೆಗಳನ್ನು ನಡೆಯದೆ ಕ್ಯಾಲೊರಿಗಳನ್ನು ಸುಡುವುದು ಹೇಗೆ | Health

19/07/2025 12:38 PM
State News
KARNATAKA

ಮದ್ದೂರು ತಾಲೂಕು ತಹಶೀಲ್ದಾರ್ ಆಗಿ ಪರಶುರಾಮ್ ಸತ್ತಿಗೇರಿ ಅಧಿಕಾರ ಸ್ವೀಕಾರ

By kannadanewsnow0519/07/2025 1:02 PM KARNATAKA 1 Min Read

ಮಂಡ್ಯ :- ಮದ್ದೂರು ತಾಲೂಕಿನ ನೂತನ ತಹಶೀಲ್ದಾರ್ ಆಗಿ ಪರಶುರಾಮ್ ಸತ್ತಿಗೇರಿ ಅವರು ಶುಕ್ರವಾರ ತಾಲ್ಲೂಕು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.…

30 ವರ್ಷಗಳ ಹಿಂದೆ ಗುತ್ತಿಗೆದಾರನ ಬಿಲ್ ಬಾಕಿ : ಕೋರ್ಟ್ ಆದೇಶದಂತೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಕಾರು ಜಪ್ತಿ

19/07/2025 12:54 PM

Rain Alert : ಉತ್ತರಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ : ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಡಿಸಿ ಮನವಿ

19/07/2025 12:20 PM

BREAKING : ಕೂಡಲಸಂಗಮ ಮಠದಿಂದ ಜಯಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಟ್ರಸ್ಟ್ ಚಿಂತನೆ : ವಿಜಯಾನಂದ ಕಾಶಪ್ಪನವರ್

19/07/2025 12:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.