Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗುಜರಾತ್ ನಲ್ಲಿ ಮತ್ತೆ ಕಂಪಿಸಿದ ಭೂಮಿ : ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು : Earth quake

21/07/2025 6:03 AM

BREAKING : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

21/07/2025 5:55 AM

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನಿಗೆ ಜಾಮೀನು : CBI ತನಿಖೆ ಅಗಲಿ ಎಂದ ಲಿಂಗರಾಜ್ ಕಣ್ಣಿ

21/07/2025 5:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ
KARNATAKA

ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ

By kannadanewsnow0919/07/2025 6:35 PM

ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೂರ್ವ ವಲಯ ಆಯುಕ್ತರ ಕಛೇರಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆಯ ಅಹವಾಲಿನ ಕಾರ್ಯಕ್ರಮದಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ ಹೆಚ್.ಆರ್.ಬಿ.ಆರ್ ಲೇಔಟ್ ನ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳ ಸಂಗ್ರಹದಿಂದಾಗಿ ನೆರೆಹೊರೆಯವರಿಗೆ ತೊಂದರೆಯಾಗುತ್ತಿರುವುದರ ಕುರಿತು ಅಹವಾಲು ಸಲ್ಲಿಸಿದರು.

ಅಹವಾಲಿಗೆ ಪ್ರತಿಕ್ರಿಯಿಸಿದ ವಲಯ ಆಯುಕ್ತರು ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷ ಸಂಗ್ರಹವಾದಲ್ಲಿ ನಾಗರಿಕರಿಗೆ ತೊಂದರೆಯಾದಂತಹ ಸಂದರ್ಭದಲ್ಲಿ ಅಂತಹ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಮಶಾನ ಭೂಮಿಯ ದುರಸ್ತಿಗೆ ಸೂಚನೆ:

ಕೆ.ಎಸ್.ಎಫ್.ಸಿ ಲೇ ಔಟ್ ನ ಸ್ಮಶಾನ ಭೂಮಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಸದರಿ ಸ್ಥಳದ ದುರಸ್ತಿ ಕಾರ್ಯ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸೂಚನೆ:

ಹೆಚ್.ಆರ್.ಬಿ.ಆರ್ ಲೇ ಔಟ್ ನಲ್ಲಿ ಹಂಚಿಕೆಯಾಗದ ಹಾಗೂ ಹಕ್ಕುದಾರರಿಲ್ಲದ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದಲ್ಲದೇ ಸ್ಥಳದ ದುರುಪಯೋಗವಾಗುತ್ತಿದ್ದು, ಮುಂದಿನ ಶುಕ್ರವಾರದಂದು ಸ್ಥಳವನ್ನು ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು. ಸದರಿ ಸ್ಥಳವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಬಳಸುವಂತೆ ತಿಳಿಸಲಾಯಿತು.

ದೂರುಗಳಿಗೆ ಶೀಘ್ರ ಸ್ಪಂದನೆ:

ಸಾರ್ವಜನಿಕರ ಕುಂದುಕೊರತೆಯ ಅಹವಾಲಿನ ಕಾರ್ಯಕ್ರಮದಲ್ಲಿ ನಾಗರೀಕರಿಂದ ಬರುವ ದೂರುಗಳಿಗೆ ಶೀಘ್ರ ಸ್ಪಂದನೆಗೆ ಸೂಚನೆ ನೀಡಲಾಯಿತು. ಪೂರ್ವ ವಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನಾಗರೀಕರು ಆಗಮಿಸಿ ವಲಯ ಆಯುಕ್ತರಿಗೆ ಧನ್ಯವಾದಗಳನ್ನು ತಿಳಿಸಿದರು.

23 ದೂರುಗಳ ಸ್ವೀಕಾರ:

ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು 23 ದೂರುಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯೊಳಗಾಗಿ ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಪೂರ್ವ ವಲಯ ಆಯುಕ್ತರು ಸೂಚನೆ ನೀಡಿದರು.

ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು:

1. ಬಂಬೂ ಬಜಾರ್ ಸಿಟಿ ಗ್ರಂಥಾಲಯದಲ್ಲಿ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವಂತೆ ವಿನಂತಿಸಿದರು.
2. ಹೈನ್ಸ್ ರಸ್ತೆ ಶಾಖೆ ನಗರ ಕೇಂದ್ರ ಗ್ರಂಥಾಲಯದ ಕಟ್ಟಡ ಅವಶೇಷ ತೆರವಿಗೆ ಹಾಗೂ ನೀರಿನ ವ್ಯವಸ್ಥೆಗೆ ಮನವಿ ನೀಡಿದರು.
3. ಅನಧಿಕೃತ ಕಟ್ಟಡಗಳ ನಿರ್ಮಾಣದಿಂದಾಗಿ ನೆರೆಹೊರೆಯವರಿಗೆ ತೊಂದರೆಯಾಗುತ್ತಿದ್ದು ಅವುಗಳ ತೆರವಿಗೆ ಮನವಿ ಮಾಡಿದರು.
4. ಕೆ.ಎಸ್.ಎಫ್ ಸಿ ಲೇಔಟ್ ನ ಪಾಲಿಕೆಯ ಸಮುದಾಯ ಭವನವನ್ನು ಸಾರ್ವಜನಿಕ ಗ್ರಂಥಾಲಯವನ್ನಾಗಿ ಪರಿವರ್ತಿಸಲು ವಿನಂತಿಸಿದರು.
5. ವಲಯದ ಹಲವು ಪ್ರದೇಶಗಳಲ್ಲಿ ಬೀದಿ ದೀಪಗಳ ಅಳವಡಿಕೆಗೆ ಮನವಿ ನೀಡಿದರು.
6. ನಮ್ಮ ಕ್ಲಿನಿಕ್ ನ ಸೂಕ್ತ ನಿರ್ವಹಣೆಗೆ ಮನವಿ ನೀಡಲಾಯಿತು.
7. ಪಾದಾಚಾರಿಯನ್ನು ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಅಂಗಡಿಗಳ ತೆರವಿಗೆ ವಿನಂತಿಸಿದರು.
8. ಹಂಚಿಕೆಯಾಗದ ಹಾಗೂ ಹಕ್ಕುದಾರರಿಲ್ಲದ ನಿವೇಶನಗಳ ಸಮಸ್ಯೆ ಬಗೆಹರಿಸಲು ಮನವಿ.
9. ಹೈನ್ಸ್ ರಸ್ತೆಯ ಪಾದಚಾರಿ ಮಾರ್ಗ ದುರಸ್ತಿಗೆ ಮನವಿ ನೀಡಿದರು.

ಈ ವೇಳೆ ಜಂಟಿ ಆಯುಕ್ತರಾದ ಸರೋಜ, ಉಪ ಆಯುಕ್ತರಾದ ರಾಜು, ಮುಖ್ಯ ಅಭಿಯಂತರರಾದ ಸುಗುಣ, ಆರೋಗ್ಯಾಧಿಕಾರಿಯಾದ ಭಾಗ್ಯಲಕ್ಷ್ಮಿ, ಕಾರ್ಯಪಾಲಕ ಅಭಿಯತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಡಿಜಿಎಂ, ಎಜಿಎಂ, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.

BREAKING: ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ 5 ನಗರ ಪಾಲಿಕೆಗಳ ಸ್ಥಾಪನೆ: ಗೆಜೆಟ್ ಅಧಿಸೂಚನೆ ಪ್ರಕಟಿಸಿ ರಾಜ್ಯ ಸರ್ಕಾರ

‘GPay, PhonePe, Paytm’ನಲ್ಲಿ ಪಾವತಿ ವಿಫಲವಾದ್ರು ಹಣ ಕಟ್ ಆಗಿದ್ಯಾ.? ಈ ಹಂತ ಅನುಸರಿಸಿ, ಮರಳಿ ಖಾತೆ ಸೇರುತ್ತೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

21/07/2025 5:55 AM1 Min Read

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನಿಗೆ ಜಾಮೀನು : CBI ತನಿಖೆ ಅಗಲಿ ಎಂದ ಲಿಂಗರಾಜ್ ಕಣ್ಣಿ

21/07/2025 5:48 AM1 Min Read

BREAKING : ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್ : ಶೀಘ್ರದಲ್ಲಿ 200 ಇವಿ ಬಸ್ ಆರಂಭ

21/07/2025 5:30 AM1 Min Read
Recent News

BREAKING : ಗುಜರಾತ್ ನಲ್ಲಿ ಮತ್ತೆ ಕಂಪಿಸಿದ ಭೂಮಿ : ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು : Earth quake

21/07/2025 6:03 AM

BREAKING : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

21/07/2025 5:55 AM

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನಿಗೆ ಜಾಮೀನು : CBI ತನಿಖೆ ಅಗಲಿ ಎಂದ ಲಿಂಗರಾಜ್ ಕಣ್ಣಿ

21/07/2025 5:48 AM

ತನ್ನ ಗಮನಕ್ಕೆ ಬಂದ ಎಲ್ಲವನ್ನು ತನಿಖೆ ಮಾಡಲು ‘ED’ ಸೂಪರ್‌ ಕಾಪ್ ಅಲ್ಲ : ತನಿಖಾ ಸಂಸ್ಥೆಗೆ ಹೈಕೋರ್ಟ್ ತರಾಟೆ

21/07/2025 5:41 AM
State News
KARNATAKA

BREAKING : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ

By kannadanewsnow0521/07/2025 5:55 AM KARNATAKA 1 Min Read

ಬೆಂಗಳೂರು : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ…

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನಿಗೆ ಜಾಮೀನು : CBI ತನಿಖೆ ಅಗಲಿ ಎಂದ ಲಿಂಗರಾಜ್ ಕಣ್ಣಿ

21/07/2025 5:48 AM

BREAKING : ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್ : ಶೀಘ್ರದಲ್ಲಿ 200 ಇವಿ ಬಸ್ ಆರಂಭ

21/07/2025 5:30 AM

BREAKING : ‘KRS’ ಹಿನ್ನೀರಿನಲ್ಲಿ ಈಜಲು ಹೋಗಿ, ಮೂವರು ಮೆಡಿಕಲ್ ವಿದ್ಯಾರ್ಥಿಗಳು ಮುಳುಗಿ ದುರಂತ ಸಾವು!

21/07/2025 5:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.