ನವದೆಹಲಿ : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾರಿ ನಿರ್ದೇಶನಾಲಯ ಅರ್ಜಿ ವಜಾಗೊಳಿಸಿದೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ವಿಚಾರಣೆಯ ವೇಳೆ ಕೇಂದ್ರ ಸರ್ಕಾರವನ್ನ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದ್ದು, ಇಡಿಯನ್ನು ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ರಾಜಕೀಯ ಹೋರಾಟ ಚುನಾವಣೆ ಕಣದಲ್ಲಿರಲಿ ಎಂದು ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದ್ದು, ದಯವಿಟ್ಟು ನನ್ನ ಬಾಯಿಯನ್ನು ತೆರೆಯುವಂತೆ ಮಾಡಬೇಡಿ ಬಾಯಿ ತೆರೆದರೆ ಕಠಿಣ ಟೀಕೆಗಳನ್ನು ನೀವು ಎದುರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಇಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ದುರಾದೃಷ್ಟವಶಾತ್ ನನಗೂ ಮಹಾರಾಷ್ಟ್ರದಲ್ಲಿ ಅನುಭವವಿದೆ. ಇದೇ ರೀತಿ ಅನ್ಯಾಯವನ್ನು ದೇಶಾದ್ಯಂತ ಮುಂದುವರಿಸುವಂತಿಲ್ಲ ಮತದಾರರ ಮುಂದೆ ರಾಜಕೀಯ ಹೋರಾಟ ಮಾಡಲಿ ರಾಜಕೀಯ ಹೋರಾಟಕ್ಕೆ ಇಡಿಯನ್ನು ಏಕೆ ಬಳಸಿಕೊಳ್ಳಲಾಗುತ್ತಿದೆ? ಎಂದು ಇಡಿಯನ್ನು ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಪ್ರಶ್ನೆ ಮಾಡಿದರು. ಬಳಿಕ ಇಡಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತು.