Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ

22/07/2025 6:40 PM

BREAKING : ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ : ಮ್ಯಾಂಚೆಸ್ಟರ್ ಟೆಸ್ಟ್’ನಿಂದ ‘ಆಕಾಶ್ ದೀಪ್’ ಔಟ್

22/07/2025 6:25 PM

BIG NEWS : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

22/07/2025 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ್
KARNATAKA

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ್

By kannadanewsnow0921/07/2025 4:59 PM

ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.

ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.

ಸಾವಿರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ. ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.

ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ

ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

Share. Facebook Twitter LinkedIn WhatsApp Email

Related Posts

ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ

22/07/2025 6:40 PM1 Min Read

BIG NEWS : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

22/07/2025 6:05 PM1 Min Read

ಮೈಸೂರಲ್ಲಿ ಭೀಕರ ಅಪಘಾತ : ಬ್ರೇಕ್ ಫೇಲ್ ಆಗಿ, ಕಂಬಕ್ಕೆ ಡಿಕ್ಕಿ ಹೊಡೆದ ‘KSRTC’ ಬಸ್ : ಪ್ರಯಾಣಿಕರು ಪಾರು

22/07/2025 5:53 PM1 Min Read
Recent News

ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ

22/07/2025 6:40 PM

BREAKING : ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ : ಮ್ಯಾಂಚೆಸ್ಟರ್ ಟೆಸ್ಟ್’ನಿಂದ ‘ಆಕಾಶ್ ದೀಪ್’ ಔಟ್

22/07/2025 6:25 PM

BIG NEWS : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

22/07/2025 6:05 PM

BREAKING : ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ‘ಏರ್ ಇಂಡಿಯಾ ವಿಮಾನ’ಕ್ಕೆ ಬೆಂಕಿ ; ಪ್ರಯಾಣಿಕರು ಸೇಫ್

22/07/2025 6:02 PM
State News
KARNATAKA

ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ

By kannadanewsnow0922/07/2025 6:40 PM KARNATAKA 1 Min Read

ಮಂಡ್ಯ : ದುಷ್ಕರ್ಮಿಗಳ ಗುಂಪೊಂದು ಪಟ್ಟಣದ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋದಾಮಿನ ಬೀಗ ಮುರಿದು ಲಕ್ಷಾಂತರ ರೂ…

BIG NEWS : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗ್ಗನ ಜಾಮೀನು ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

22/07/2025 6:05 PM

ಮೈಸೂರಲ್ಲಿ ಭೀಕರ ಅಪಘಾತ : ಬ್ರೇಕ್ ಫೇಲ್ ಆಗಿ, ಕಂಬಕ್ಕೆ ಡಿಕ್ಕಿ ಹೊಡೆದ ‘KSRTC’ ಬಸ್ : ಪ್ರಯಾಣಿಕರು ಪಾರು

22/07/2025 5:53 PM

ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕೋರ್ಟ್ ಸೂಚನೆ

22/07/2025 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.