ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನ ಕೊಲೆ ಮಾಡಲಾಗಿದೆ. ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕನವಾರಿಯಲ್ಲಿ ಚಾಕುವಿನಿಂದ ಕತ್ತು ಕೊಯ್ದು 3 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮಾರುತಿ ವಾಲಿಕರ್ ಎಂಬುವವರ ಮಗುಬಿನ ಕೊಲೆ ನಡೆದಿದೆ. ಮಾರುತಿ ಸಹೋದರ ಭೀಮಪ್ಪ ವಾಲೀಕಾರನಿಂದಲೇ ಈ ಒಂದು ಕೃತ್ಯ ನಡೆದಿದೆ. ಅಮಿನಗಡ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.