Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಚೀನಾ ಗಡಿ ಬಳಿ ರಷ್ಯಾದ 50 ಪ್ರಯಾಣಿಕರಿದ್ದ ವಿಮಾನ ನಾಪತ್ತೆ : ತೀವ್ರ ಹುಡುಕಾಟ | plane missing

24/07/2025 12:01 PM

BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘ಸಂಬಳ ಪ್ಯಾಕೇಜಿ’ನಲ್ಲಿ ನೋಂದಾಯಿಸುವುದು ಕಡ್ಡಾಯ

24/07/2025 11:59 AM

ಮುಂಬೈ ರೈಲು ಸ್ಫೋಟ ಪ್ರಕರಣ: ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ | Mumbai train blast case

24/07/2025 11:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘ಸಂಬಳ ಪ್ಯಾಕೇಜಿ’ನಲ್ಲಿ ನೋಂದಾಯಿಸುವುದು ಕಡ್ಡಾಯ
KARNATAKA

BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘ಸಂಬಳ ಪ್ಯಾಕೇಜಿ’ನಲ್ಲಿ ನೋಂದಾಯಿಸುವುದು ಕಡ್ಡಾಯ

By kannadanewsnow0924/07/2025 11:59 AM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ ಸರ್ಕಾರದಿಂದ ನೇರವಾಗಿ, ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಅರ್ಹ ಅಧಿಕಾರಿ, ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಸರ್ಕಾರದ ಇಲಾಖೆಗಳಲ್ಲಿ ನೇರವಾಗಿ/ಪರೋಕ್ಷವಾಗಿ ಇರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಜಾಲವನ್ನು ಜಾರಿಗೆ ತರಲು ಅಥವಾ ಹೆಚ್ಚಿಸಲು ಉದ್ದೇಶಿಸಿರುವ ಸರ್ಕಾರಿ ಆದೇಶ ಸಂಖ್ಯೆ ಎಫ್‌ಡಿ-ಸಿಎಎಂ/1/2025, ದಿನಾಂಕ: 21.02.2025 ರ ಬಗ್ಗೆ ತಮ್ಮ ಗಮನವನ್ನು ಸೆಳೆಯಲಾಗಿದೆ ಎಂದಿದೆ.

ಮೇಲಿನ ಸರ್ಕಾರಿ ಆದೇಶದ ಉದ್ದೇಶವೆಂದರ ವಿವಿಧ ಬ್ಯಾಂಕುಗಳು ತಮ್ಮ ಸಂಬಳ ಪ್ಯಾಕೇಜುಗಳಲ್ಲಿ ಉಚಿತವಾಗಿ ಅಥವಾ ನಾಮಮಾತ್ರ ವೆಚ್ಚದಲ್ಲಿ ನೀಡುವ ಅಪಘಾತ/ಅವಧಿ ವಿಮಾ ರಕ್ಷಣೆ ಮತ್ತು ಇತರ ಪ್ರಯೋಜನಗಳನ್ನು ಅಧಿಕಾರಿ/ನೌಕರರು ಪಡೆದು, ತಮ್ಮ ಅವಲಂಬಿತ ಕುಟುಂಬಗಳನ್ನು ಸುರಕ್ಷಿತಗೊಳಿಸುವುದು. ಅಲ್ಲದೆ, ಸಂಬಂಧಪಟ್ಟ ಅಧಿಕಾರಿ/ನೌಕರರು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನ (PMJJBY) ಯೋಜನೆಗಳಡಿ ಹೆಚ್ಚಿನ ವಿಮಾ ರಕ್ಷಣೆಗಾಗಿ ನೋಂದಾವಣಿ ಮಾಡಿಕೊಳ್ಳಲು ಪ್ರೇರೇಪಿಸುವುದು. ಅದಲ್ಲದೆ ಹೆಚ್ಚುವರಿ/ನಾಮಮಾತ್ರ ಪ್ರೀಮಿಯಂ ಪಾವತಿಸುವ ಮೂಲಕ, ಹೆಚ್ಚಿನ ವಿಮಾ ರಕ್ಷಣೆಗಾಗಿ ಬ್ಯಾಂಕುಗಳು ನೀಡುತ್ತಿರುವ ವೈಯಕ್ತಿಕ ಅಪಘಾತ ವಿಮೆಯನ್ನು ಪಡೆಯಲು ಪ್ರೋತ್ಸಾಹಿಸುವುದು.

ಆದ್ದರಿಂದ, ಸರ್ಕಾರಿ ಆದೇಶದ ಹೊರಡಿಸಿದ ಮೂರು ತಿಂಗಳಲ್ಲಿ ಎಲ್ಲಾ ಅಧಿಕಾರಿ/ನೌಕರರು ಮತ್ತು ವಿವಿಧ ನಿಗಮಗಳು/ಮಂಡಳಿಗಳ ಉದ್ಯೋಗಿಗಳು ತಮ್ಮ ಕುಟುಂಬಗಳ ಹಿತದೃಷ್ಟಿಯಿಂದ ತಮ್ಮ ಆಯ್ಕೆಯ ಯಾವುದೇ ಬ್ಯಾಂಕ್ ನೀಡುವ ಸಂಬಳ ಪ್ಯಾಕೇಜ್‌ಗಳನ್ನು ಸ್ವಯಂಪ್ರೇರಿತವಾಗಿ ಆಯ್ಕೆ ಮಾಡಲು ಹೆಚ್ಚಿನ ಆಸಕ್ತಿಯಿಂದ ಮನವೊಲಿಸುವುದು ಮತ್ತು ಸಂಬಂಧಪಟ್ಟ ಬ್ಯಾಂಕಿಗೆ ಸಂಬಳ ಪ್ಯಾಕೇಜುಗಳಲ್ಲಿ ಸೇರಿಸಲು ಅರ್ಜಿಯನ್ನು ಸಲ್ಲಿಸಲು ತಮ್ಮನ್ನು ಮತ್ತು ಎಲ್ಲಾ ಅಧಿಕಾರಿ/ನೌಕರರನ್ನು ಪ್ರೇರೇಪಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಇಲಾಖಾ ಮುಖ್ಯಸ್ಥರನ್ನು ಕೋರಲಾಗಿತ್ತು.

ಸರ್ಕಾರಿ ಆದೇಶ ಹೊರಡಿಸಿ 4 ತಿಂಗಳಾದರೂ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಂಡ ಅಧಿಕಾರಿಗಳು/ನೌಕರರ ಸಂಖ್ಯೆ 3 ಲಕ್ಷಗಳಿಗೆ ಮಾತ್ರ ತಲುಪಿದೆಯೆಂದು ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯಡಿ 32,611 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಯಡಿ 25,386 ನೋಂದಣಿಗಳು ಮಾತ್ರ ಹೆಚ್.ಆರ್.ಎಂ.ಎಸ್ ನಲ್ಲಿ ದಾಖಲಾಗಿದ್ದು, ಯೋಜನೆಗಳಡಿ ಹೆಚ್ಚಿನ ಪ್ರಗತಿಯಾಗಿರುವುದಿಲ್ಲವೆಂದು
ತಿಳಿದು ಬಂದಿದೆ.

ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಎಲ್ಲಾ ಅರ್ಹ ಅಧಿಕಾರಿ/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗೆ ಸೂಚಿಸಿದಂತೆ ಸಂಬಳ ಪ್ಯಾಕೇಜುಗಳಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ಸರ್ಕಾರವು
ಯೋಚಿಸಿದೆ:

ಸಿ ಗುಂಪಿನ ಅಧಿಕಾರಿಗಳು – 31.08-2025ರ ಒಳಗೆ

ಬಿ ಗುಂಪಿನ ಅಧಿಕಾರಿಗಳು – 30.09.2025ರ ಒಳಗೆ

ಸಿ ಗುಂಪಿನ ಅಧಿಕಾರಿಗಳು – 30.11.2025ರ ಒಳಗೆ

ಡಿ ಗುಂಪಿನ ಅಧಿಕಾರಿಗಳು – 31.01.206ರ ಒಳಗೆ

ಈ ಹಿನ್ನೆಲೆಯಲ್ಲಿ ತಮ್ಮ ಸಂಘ ಮತ್ತು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಸಂಘಗಳ ಸಂಬಂಧಪಟ್ಟ ಅಧಿಕಾರಿ/ನೌಕರ ಸದಸ್ಯರನ್ನು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಆದ್ಯತೆಯ ಮೇಲೆ ಪ್ರೇರೇಪಿಸಲು ಕೋರಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆ ನೊಟೀಸ್: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯ ಹೈಲೈಟ್ಸ್

BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ

24/07/2025 11:38 AM3 Mins Read

BREAKING: ಸಾಗರದಲ್ಲಿ ಸಮೀಪ ‘KSRTC’- ಕ್ಯಾಂಟರ್ ನಡುವೆ ಭೀಕರ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

24/07/2025 11:26 AM1 Min Read

BREAKING : ಸಚಿವ ಭೈರತಿ ಸುರೇಶ್ ಪಿಎಸ್ ಮನೆ ಮೇಲೆ ಲೋಕಾಯುಕ್ತ ದಾಳಿ, ಅಪಾರ ಪ್ರಮಾಣದ ದಾಖಲೆ ಪತ್ರಗಳು ವಶಕ್ಕೆ | Lokayukta Raid

24/07/2025 11:01 AM1 Min Read
Recent News

BREAKING: ಚೀನಾ ಗಡಿ ಬಳಿ ರಷ್ಯಾದ 50 ಪ್ರಯಾಣಿಕರಿದ್ದ ವಿಮಾನ ನಾಪತ್ತೆ : ತೀವ್ರ ಹುಡುಕಾಟ | plane missing

24/07/2025 12:01 PM

BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘ಸಂಬಳ ಪ್ಯಾಕೇಜಿ’ನಲ್ಲಿ ನೋಂದಾಯಿಸುವುದು ಕಡ್ಡಾಯ

24/07/2025 11:59 AM

ಮುಂಬೈ ರೈಲು ಸ್ಫೋಟ ಪ್ರಕರಣ: ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ | Mumbai train blast case

24/07/2025 11:58 AM

BREAKING: ಚೀನಾ ಗಡಿ ಬಳಿ ರಷ್ಯಾದ 50 ಪ್ರಯಾಣಿಕರಿದ್ದ ವಿಮಾನ ನಾಪತ್ತೆ | plane missing

24/07/2025 11:42 AM
State News
KARNATAKA

BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ‘ಸಂಬಳ ಪ್ಯಾಕೇಜಿ’ನಲ್ಲಿ ನೋಂದಾಯಿಸುವುದು ಕಡ್ಡಾಯ

By kannadanewsnow0924/07/2025 11:59 AM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ ಸರ್ಕಾರದಿಂದ ನೇರವಾಗಿ, ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಅರ್ಹ ಅಧಿಕಾರಿ, ನೌಕರರು…

ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ

24/07/2025 11:38 AM

BREAKING: ಸಾಗರದಲ್ಲಿ ಸಮೀಪ ‘KSRTC’- ಕ್ಯಾಂಟರ್ ನಡುವೆ ಭೀಕರ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

24/07/2025 11:26 AM

BREAKING : ಸಚಿವ ಭೈರತಿ ಸುರೇಶ್ ಪಿಎಸ್ ಮನೆ ಮೇಲೆ ಲೋಕಾಯುಕ್ತ ದಾಳಿ, ಅಪಾರ ಪ್ರಮಾಣದ ದಾಖಲೆ ಪತ್ರಗಳು ವಶಕ್ಕೆ | Lokayukta Raid

24/07/2025 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.