ಬೆಳಗಾವಿ : ನೀನು ಸತ್ತರೆ ಅಕ್ಕ ಚೆನ್ನಾಗಿರ್ತಾಳೆ ಎಂದು ಭಾಮೈದ ಹೇಳಿದಕ್ಕೆ, ಪತ್ನಿ ಎದುರೇ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಮಲ್ಲಪ್ಪ ಎಂಬುವರು ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ್ದಾರೆ. ಪತ್ನಿ ರೇಖಾ, ಬಾಮೈದ ಮಕಲ್ಲಿಕಾರ್ಜುನ್ ಜೊತೆಗೆ ಕಿರಿಕ್ ಮಾಡಿಕೊಂಡು ಮಲ್ಲಪ್ಪ ಕುಡಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಮಲ್ಲಿಕಾರ್ಜುನ ವಿರುದ್ಧ ಕೇಸ್ ದಾಖಲಾಗಿದೆ.