ಬೆಂಗಳೂರು : ಇತ್ತೀಚಿಗೆ ಉದ್ಯೋಗ ಅರಸಿ ಉತ್ತರ ಭಾರತದಿಂದ ಬರುವ ಯುವ ಯುವತಿಯರು, ಕನ್ನಡಿಗರ ಮೇಲೇನೆ ಮತ್ತು ಅರ್ಜನ್ಯ ಅಲ್ಲಿ ಹಾಗೂ ಕನ್ನಡಿಗರನ್ನು ಕೀಳಾಗಿ ನೋಡುವ ಪ್ರಕರಣಗಳು ಹೆಚ್ಚುತ್ತಿವೆ ಇದೀಗ ಉತ್ತರ ಭಾರತದ ಒಡಿಶಾದ ರಾಜ್ಯದಿಂದ ಬೆಂಗಳೂರಲ್ಲಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳು, ಬೆಂಗಳೂರಿನ ಜನತೆಗೆ ಶಿಕ್ಷಣ ಇದೆ ಆದರೆ ತಲೆಯಲ್ಲಿ ಬುದ್ಧಿ ಇಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾಳೆ.
ಹೌದು ಬೆಂಗಳೂರಿಗರ ತಲೆಯಲ್ಲಿ ಬುದ್ದಿ ಇಲ್ಲ ಎಂದು ಒಡಿಶಾ ಮೂಲದ ಯುವತಿ ನೇಹಾ ಬಿಸ್ವಾಲ್ ದುರಹಂಕಾರದ ಮಾತಗಳನ್ನು ಆಡಿದ್ದಾಳೆ.ನೇಹಾ ಬಿಸ್ವಾಲ್ ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು, ಪಿಜಿಯಲ್ಲಿ ವಾಸವಾಗಿದ್ದಾಳೆ. ಈಕೆ ಬೆಂಗಳೂರು ಜನರ ಬಗ್ಗೆ ಕೆಟ್ಟದಾಗಿ ಮಾತನಾಡಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಯುವತಿ ನೇಹಾ ಬಿಸ್ವಾಲ್ ವಿಡಿಯೋದಲ್ಲಿ ಹೇಳಿರುವಂತೆ, “ಈಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನನ್ನ ಪಕ್ಕದಲ್ಲೇ ಕಾರುವೊಂದು ಪಾಸ್ ಆಗಿದೆ. ಆಗ, ರಸ್ತೆ ಮೇಲೆ ನಿಂತಿದ್ದ ನೀರು ನನ್ನ ಮೈಮೇಲೆ ಹಾರಿದೆ. ಮುಖಕ್ಕೆ ಸಿಡಿದಿದೆ” ಎಂದು ಹೇಳಿದ್ದಾಳೆ.ಮುಂದುವರೆದು ನೇಹಾ ಬಿಸ್ವಾಲ್ ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ. ಜೋರು ಮಳೆ ಬರುತ್ತಿದ್ದರೂ, ವಾಹನವನ್ನು ಜೋರಾಗಿ ಓಡಿಸುತ್ತಾರೆ. ಬೆಂಗಳೂರಿಗರು ಅನಕ್ಷರಸ್ಥರು. ಚೂ*** ಥೂ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಕೋಪದಲ್ಲಿ ಬೆಂಗಳೂರಿನ ಬಗ್ಗೆ ನಾಲಿಗೆ ಹರಿಬಿಟ್ಟಿ ನೇಹಾ ಬಿಸ್ವಾಲ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರು ಕಾಮೆಂಟ್ ಮೂಲಕ ನೇಹಾ ಬಿಸ್ವಾಲ್ಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.