ಬೆಂಗಳೂರು : ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ನಾಲ್ವಡಿ ಕೃಷ್ಣರಾಜ ಅವರನ್ನು ಹೋಲಿಕೆ ಮಾಡಿದ್ದು, ಇದೀಗ ವಿಪಕ್ಷಗಳಿಗೆ ಈ ವಿಚಾರ ಪ್ರಮುಖ ಅಸ್ತ್ರವಾಗಿದೆ. ಇದೇ ವಿಚಾರವಾಗಿ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ಚಿಸಿ ಮಾದೇವಪ್ಪ ಬೇರೆಯವರನ್ನು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಹೋಲಿಕೆ ಮಾಡಲು ಆಗಲ್ಲ ಎಂದು ಯತೀಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಎಲ್ಲರ ಗೌರವ ಹಾಗೂ ಪ್ರೀತಿಗೆ ಪಾತ್ರರಾದವರು. ರಾಜ್ಯದ ಹಿತ ಕಾಪಾಡುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಶ್ರೇಷ್ಠ ಆಡಳಿತ ಕೊಟ್ಟಿದ್ದಾರೆ. ಬೇರೆಯವರನ್ನು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಹೋಲಿಕೆ ಮಾಡಲು ಆಗಲ್ಲ. ಒಡೆಯರ್ ಆಡಳಿತ, ನಿಲುವು ನಡೆದ ನಮಗೆಲ್ಲರಿಗೂ ಸ್ಪೂರ್ತಿ. ಸಾಮಾಜಿಕ ನ್ಯಾಯ ಅನೇಕ ವಿಷಯಗಳಲ್ಲಿ ಅವರಿಗೆ ಬದ್ಧತೆ ಇತ್ತು ಎಂದು ಮಹದೇವಪ್ಪ ತಿಳಿಸಿದರು.