Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಫಾರ್ಚೂನ್ ಗ್ಲೋಬಲ್ 500’ ಪಟ್ಟಿಯಲ್ಲಿ ಮುಂದುವರಿದ ರಿಲಯನ್ಸ್ ಇಂಡಸ್ಟ್ರೀಸ್ ಪಾರಮ್ಯ

30/07/2025 5:35 PM

BREAKING: ಐಸಿಎಐ ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಟಿ.ಎನ್.ಮನೋಹರನ್ ನಿಧನ | T N Manoharan No More

30/07/2025 5:21 PM

BREAKING : IDBI ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ‘ಟಿ. ಎನ್ ಮನೋಹರನ್’ ವಿಧಿವಶ |TN Manoharan No More

30/07/2025 5:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಕ್ವಾಂಟಮ್‌ ಕ್ಷೇತ್ರದಲ್ಲಿ ನೋಬೆಲ್‌ ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳೊಂದಿಗೆ ಸಭೆ: ಸಚಿವ ಎನ್ ಎಸ್ ಭೋಸರಾಜು
KARNATAKA

ನಾಳೆ ಕ್ವಾಂಟಮ್‌ ಕ್ಷೇತ್ರದಲ್ಲಿ ನೋಬೆಲ್‌ ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳೊಂದಿಗೆ ಸಭೆ: ಸಚಿವ ಎನ್ ಎಸ್ ಭೋಸರಾಜು

By kannadanewsnow0929/07/2025 3:00 PM

ಬೆಂಗಳೂರು: ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನಕ್ಕೆ ಆಗಮಿಸುತ್ತಿರುವ ನೊಬೆಲ್‌ ಪುರಸ್ಕೃತ ವಿಜ್ಞಾನಿಗಳಾದ ಪ್ರೊ. ಡಂಕನ್‌ ಹಲ್ದಾನೆ (Prof. Duncan Haldane – 2016 Noble Lauteate) ಹಾಗೂ ಪ್ರೊ. ಡೇವಿಡ್‌ ಗ್ರಾಸ್‌ (Prof. David Gross – 2004 Nobel Laureate) ಅವರೊಂದಿಗೆ ಜುಲೈ 30 ರಂದು ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ನಡೆಸಿ ಮಾತನಾಡಿದರು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ನಮ್ಮ ಸರ್ಕಾರವು ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ಜಾಗತಿಕ ಕೇಂದ್ರವನ್ನಾಗಿ ರಾಜ್ಯವನ್ನಾಗಿ ರೂಪಿಸುವಲ್ಲಿ ಬದ್ಧವಾಗಿದೆ. ಈ ಸಂಬಂಧ ಕರ್ನಾಟಕವನ್ನು ಕ್ವಾಂಟಮ್ ರಾಜಧಾನಿಯನ್ನಾಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ರೂಪುರೇಷಗಳನ್ನು ಸಿದ್ದಪಡಿಸಲು ನಮ್ಮ ಸರ್ಕಾರ ಮುಂದಡಿ ಇಟ್ಟಿದೆ. ಐಟಿ, ಏರೋಸ್ಪೇಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುಂತೆ ಕ್ವಾಂಟಮ್ ಕ್ಷೇತ್ರದಲ್ಲೂ ನಮ್ಮ ರಾಜ್ಯದ ಛಾಪು ಮೂಡಿಸುವ ಸಲುವಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅನೇಕ ಕ್ಷೇತ್ರಗಳಲ್ಲಿ ಕ್ವಾಂಟಮ್ ತಂತ್ರಜ್ಞಾನ ತನ್ನ ಛಾಪನ್ನು ಮೂಡಿಸಿ, ಆರ್ಥಿಕ, ಸಾಮಾಜಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಬೆಂಗಳೂರು ಭಾರತದ ನಾವಿನ್ಯತೆಯ ರಾಜಧಾನಿಯಾಗಿರುವ ಜೊತೆಗೇ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಪೂರಕ ಸೌಕರ್ಯಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಜುಲೈ 31 ಹಾಗೂ ಆಗಸ್ಟ್‌ 1 ರಂದು ಎರಡು ದಿನಗಳ ಕಾಲ “ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನ” ವನ್ನು ಆಯೋಜಿಸಲಾಗಿದೆ ಎಂದರು.

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಆಯೋಜಿಸಲಾಗುತ್ತಿರುವ ಈ ಸಮ್ಮೇಳನದಲ್ಲಿ ಕ್ವಾಂಟಮ್‌ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವಂತ ನೊಬೆಲ್‌ ಪ್ರಶಸ್ತಿಗೆ ಭಾಜನರಾಗಿರವಂತಹ ಪ್ರೊ. ಡಂಕನ್‌ ಹಲ್ದಾನೆ (Prof. Duncan Haldane – 2016 Noble Laureate) ಹಾಗೂ ಪ್ರೊ. ಡೇವಿಡ್‌ ಗ್ರಾಸ್‌ (Prof. David Gross – 2004 Nobel Laureate) ಭಾಗವಹಿಸಲಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಸಭೆಯಲ್ಲಿ ಕ್ವಾಂಟಮ್‌ ಕ್ಷೇತ್ರದ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಅಗತ್ಯ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಕೆಸ್ಟೆಪ್ಸ್‌ ನಿರ್ದೇಶಕರಾದ ಸದಾಶಿವ ಪ್ರಭು, ಕ್ವಾಂಟಮ್‌ ಸಮ್ಮೇಳನದ ಸಹಸಂಚಾಲಕರಾದ ಐಐಎಸ್‌ಸಿ ಪ್ರೊ. ಅಕ್ಷಯ್ ನಾಯ್ಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING: ಬೆಂಗಳೂರಲ್ಲಿ ಉಗ್ರರ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದ ಶಂಕಿತ ಮಹಿಳೆ ಪೊಲೀಸರು ಅರೆಸ್ಟ್

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ‘ದಿ ರಾಮೇಶ್ವರಂ ಕೆಫೆ’ಯಿಂದ ಉತ್ತರ ಭಾರತದ ಶೈಲಿಯ ‘ತೀರ್ಥ’ ಕೆಫೆ ಆರಂಭ

30/07/2025 4:55 PM2 Mins Read

BREAKING: ಆ.1ರಿಂದ ಬೆಸ್ಕಾಂ ‘ಎನಿ ಟೈಮ್ ಪೇಮೆಂಟ್'(ATP) ಪಾವತಿ ಯಂತ್ರದ ಸೇವೆ ಸ್ಥಗಿತ

30/07/2025 4:51 PM1 Min Read

ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿವೈ ವಿಜಯೇಂದ್ರ ಸವಾಲು

30/07/2025 4:46 PM3 Mins Read
Recent News

‘ಫಾರ್ಚೂನ್ ಗ್ಲೋಬಲ್ 500’ ಪಟ್ಟಿಯಲ್ಲಿ ಮುಂದುವರಿದ ರಿಲಯನ್ಸ್ ಇಂಡಸ್ಟ್ರೀಸ್ ಪಾರಮ್ಯ

30/07/2025 5:35 PM

BREAKING: ಐಸಿಎಐ ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಟಿ.ಎನ್.ಮನೋಹರನ್ ನಿಧನ | T N Manoharan No More

30/07/2025 5:21 PM

BREAKING : IDBI ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ‘ಟಿ. ಎನ್ ಮನೋಹರನ್’ ವಿಧಿವಶ |TN Manoharan No More

30/07/2025 5:18 PM

ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ‘ದಿ ರಾಮೇಶ್ವರಂ ಕೆಫೆ’ಯಿಂದ ಉತ್ತರ ಭಾರತದ ಶೈಲಿಯ ‘ತೀರ್ಥ’ ಕೆಫೆ ಆರಂಭ

30/07/2025 4:55 PM
State News
KARNATAKA

ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ‘ದಿ ರಾಮೇಶ್ವರಂ ಕೆಫೆ’ಯಿಂದ ಉತ್ತರ ಭಾರತದ ಶೈಲಿಯ ‘ತೀರ್ಥ’ ಕೆಫೆ ಆರಂಭ

By kannadanewsnow0930/07/2025 4:55 PM KARNATAKA 2 Mins Read

ಬೆಂಗಳೂರು: ದಕ್ಷಿಣ ಭಾರತ ಪಾಕಪದ್ಧತಿಗೆ ಹೆಸರುವಾಸಿಯಾಗಿರುವ ದಿ ರಾಮೇಶ್ವರಂ ಕೆಫೆ ಇದೀಗ ಉತ್ತರ ಭಾರತದ ಶೈಲಿ ಆಹಾರಪದ್ಧತಿ ಪರಿಚಯಿಸುತ್ತಿದ್ದು, ಕನ್ನಿಂಗ್‌ಹ್ಯಾಮ್‌…

BREAKING: ಆ.1ರಿಂದ ಬೆಸ್ಕಾಂ ‘ಎನಿ ಟೈಮ್ ಪೇಮೆಂಟ್'(ATP) ಪಾವತಿ ಯಂತ್ರದ ಸೇವೆ ಸ್ಥಗಿತ

30/07/2025 4:51 PM

ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿವೈ ವಿಜಯೇಂದ್ರ ಸವಾಲು

30/07/2025 4:46 PM

BREAKING : ಉತ್ತರ ಕನ್ನಡದಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆ, ಇಬ್ಬರ ರಕ್ಷಣೆ

30/07/2025 4:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.