Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಗ್ರಾ.ಪಂ `PDO’ ಗಳ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

02/08/2025 8:09 AM

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್ : ಓರ್ವ ಉಗ್ರನ ಹತ್ಯೆ

02/08/2025 8:06 AM

SHOCKING : ಶಾಲೆಯ ಹೊರಗೆ 15 ವರ್ಷದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

02/08/2025 8:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ
KARNATAKA

ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ

By kannadanewsnow0931/07/2025 6:35 PM

ಬೆಂಗಳೂರು: “ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ‌ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿ ಹಾಗೂ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.

“ಮತದಾರರ ಹಕ್ಕು, ಸಂವಿಧಾನದ ರಕ್ಷಣೆ ಮಾಡಬೇಕಿದೆ. ಕರ್ನಾಟಕದ ಭೂಮಿಯಿಂದಲೇ ಈ ಹೋರಾಟ ಪ್ರಾರಂಭ ಮಾಡಿದರೆ ಹೆಚ್ಚಿನ ಶಕ್ತಿ ದೊರೆಯುತ್ತದೆ ಎಂದು ರಾಹುಲ್ ಗಾಂಧಿಯವರು ಇಲ್ಲಿಂದ ಪ್ರಾರಂಭ ಮಾಡುತ್ತಿದ್ದಾರೆ. ವಿಧಾನಸಭೆ, ಲೋಕಸಭೆ ಚುನಾವಣೆ ವೇಳೆ ಆದಂತಹ ಹಲವಾರು ಲೋಪದೋಷಗಳನ್ನು ನಮ್ಮ ನಾಯಕರು ಎತ್ತಿಹಿಡಿಯಲಿದ್ದಾರೆ” ಎಂದು ತಿಳಿಸಿದರು.

“ನಮ್ಮ ಸರ್ಕಾರವೇ ಮಾಡಿರುವ ನಿಯಮಗಳು ಹಾಗೂ ನ್ಯಾಯಾಲಯ ನೀಡಿರುವ ನಿರ್ದೇಶನದ ಮೇರೆಗೆ ಪ್ರತಿಭಟನೆ ನಡೆಸಲಾಗುವುದು. ಮುಖಂಡರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ. ರಾಜ್ಯದ ಎಲ್ಲಾ ಬ್ಲಾಕ್ ಗಳಿಂದ ಪ್ರತಿನಿಧಿಗಳು ಹಾಜರಾಗಬೇಕು ಎಂದು ಆಹ್ವಾನ ನೀಡಲಾಗಿದೆ” ಎಂದರು.

ಕರಡು ಮತದಾರರ‌ ಪಟ್ಟಿಯ ಬಗ್ಗೆ ಏಕೆ ಕಾಂಗ್ರೆಸ್ ಈ‌‌ ಮೊದಲೇ ಆಕ್ಷೇಪಣೆ ಸಲ್ಲಿಸಲಿಲ್ಲ ಎಂದಾಗ, “ನಾವು ಆಕ್ಷೇಪಣೆ ಸಲ್ಲಿಸಿದ್ದೆವು ಆದರೆ ಚುನಾವಣಾ ಆಯೋಗ ಅದನ್ನು ಸ್ವೀಕರಿಸಲಿಲ್ಲ. ಮಹದೇವರಪುರ ಕ್ಷೇತ್ರದಲ್ಲಿ ಅಭ್ಯರ್ಥಿ ನಾಗೇಶ್ ಅವರು ಹಾಗೂ ಅವರ ಮಗ ದಾಖಲೆಗಳನ್ನು ತೊರಿಸಿದರು. ದಿನೇಶ್ ಗುಂಡೂರಾವ್ ಕ್ಷೇತ್ರ ಗಾಂಧಿನಗರದಲ್ಲೂ ಇದೇ ರೀತಿ ನಡೆದಿದೆ. ಇಲ್ಲಿ ಒಂದು ವಾರ್ಡ್ ನಲ್ಲಿ 7 ಸಾವಿರದಷ್ಟು ಮತದಾರರ ಸೇರ್ಪಡೆಯಾಗಿದೆ” ಎಂದರು‌.

ಪಾದಯಾತ್ರೆ ಎಲ್ಲಿಂದ ಎಲ್ಲಿಯವರೆಗೆ ಇರಲಿದೆ ಎಂದು ಕೇಳಿದಾಗ, “ನಾವು ಪಾದಯಾತ್ರೆ ಮಾಡುತ್ತಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ ನಮ್ಮ ವಿಚಾರ ಜನರಿಗೆ ತಿಳಿಸುತ್ತೇವೆ. ನಂತರ ಐದಾರು ನಾಯಕರು ಚುನಾವಣಾ ಆಯೋಗ ಕಚೇರಿಗೆ ಹೋಗಿ ಮನವಿ ಸಲ್ಲಿಸುತ್ತೇವೆ” ಎಂದರು.

ನಡಿಗೆ ಮೂಲಕ ಹೋಗುತ್ತೀರಾ ಎಂದು ಕೇಳಿದಾಗ, “ಪೊಲೀಸರು ವಾತಾವರಣ ನೋಡಿ ಯಾವ ಸಲಹೆ ನೀಡುತ್ತಾರೋ ಆ ರೀತಿ ಮಾಡುತ್ತೇವೆ. ನಡಿಗೆ ಮೂಲಕ ಆದರೂ ಹೋಗಬಹುದು ಅಥವಾ ವಾಹನದಲ್ಲಿಯಾದರೂ ತೆರಳಬಹುದು” ಎಂದರು.

ಯಾವ ಕ್ಷೇತ್ರಗಳ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವನ್ನು ರಾಹುಲ್ ಗಾಂಧಿ ಅವರು ತೀರ್ಮಾನ ಮಾಡಿ ಬಹಿರಂಗಪಡಿಸಿದ್ದಾರೆ. ನಾನು ಈ ವಿಚಾರವಾಗಿ ಏನು ಹೇಳುವುದಿಲ್ಲ” ಎಂದರು.

ಚುನಾವಣೆಯಾದ 45 ದಿನಗಳವರೆಗೂ ಕಾಂಗ್ರೆಸ್ ನವರು ಏನು ಮಾಡುತ್ತಿದ್ದರು ಎಂಬ ಬಿಜೆಪಿ ಪ್ರಶ್ನೆ ಬಗ್ಗೆ ಕೇಳಿದಾಗ, “ನಾವು ಚುನಾವಣೆ ನಂತರ ಮಲಗಿದ್ದೆವು. ಅಧಿಕಾರ ಪ್ರಮಾಣ ವಚನ ಸ್ವೀಕರಿಸಿ, ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿ ಜನರಿಗೆ ಅನುಕೂಲ ಮಾಡಿಕೊಟ್ಟೆವು” ಎಂದು ತಿರುಗೇಟು ನೀಡಿದರು.

BIG NEWS: ‘ಸಾರಿಗೆ ನೌಕರ’ರ ವೇತನ ಪರಿಷ್ಕರಣೆಗೆ ಸರ್ಕಾರದ ನಡುವೆ ಹಗ್ಗಜಗ್ಗಾಟ: ಇಲ್ಲಿದೆ ಇನ್ ಸೈಟ್ ಸ್ಟೋರಿ

BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಗ್ರಾ.ಪಂ `PDO’ ಗಳ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

02/08/2025 8:09 AM1 Min Read

SHOCKING : ಶಾಲೆಯ ಹೊರಗೆ 15 ವರ್ಷದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

02/08/2025 8:05 AM1 Min Read

BREAKING : ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ

02/08/2025 8:02 AM1 Min Read
Recent News

BREAKING : ರಾಜ್ಯದ ಗ್ರಾ.ಪಂ `PDO’ ಗಳ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

02/08/2025 8:09 AM

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್ : ಓರ್ವ ಉಗ್ರನ ಹತ್ಯೆ

02/08/2025 8:06 AM

SHOCKING : ಶಾಲೆಯ ಹೊರಗೆ 15 ವರ್ಷದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

02/08/2025 8:05 AM

BREAKING : ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ

02/08/2025 8:02 AM
State News
KARNATAKA

BREAKING : ರಾಜ್ಯದ ಗ್ರಾ.ಪಂ `PDO’ ಗಳ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

By kannadanewsnow5702/08/2025 8:09 AM KARNATAKA 1 Min Read

ಬೆಂಗಳೂರು : 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ…

SHOCKING : ಶಾಲೆಯ ಹೊರಗೆ 15 ವರ್ಷದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

02/08/2025 8:05 AM

BREAKING : ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ

02/08/2025 8:02 AM

BREAKING : ಕಾರು ಡಿಕ್ಕಿಯಾಗಿ ಯುವಕನ ಕಾಲು ಮುರಿತ ಕೇಸ್ : ನಟ `ರಕ್ಷಕ್ ಬುಲೆಟ್’ ವಿರುದ್ಧ `FIR’ ದಾಖಲು

02/08/2025 7:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.