ಧರ್ಮಸ್ಥಳ: ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂದು 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ವೇಳೆಯಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ.
ಇಂದು ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳ ಹುಟುಕಾಟಕ್ಕೆ ಭೂಮಿ ಅಗೆಯಲಾಗುತ್ತಿತ್ತು. 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ಸಂದರ್ಭದಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ನಿನ್ನೆ ಎಸ್ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ ಕುರಿತಂತೆ ಸಂಶೋಧನೆಯನ್ನು ವೈದ್ಯರ ತಂಡವು ನಡೆಸಲಿದೆ.
ಇದೇ ಸಂದರ್ಭದಲ್ಲಿ ಇಂದು 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ಸಂದರ್ಭದಲ್ಲಿ ಒಂದು ಕರ್ಚಿಪ್ ದೊರೆತಿದೆ. ಅದನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಎಫ್ಎಸ್ಎಲ್ ತನಿಖೆಗೆ ಕಳುಹಿಸಿದ್ದಾರೆ. ಸದ್ಯ 8ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆಗೆ ಎಸ್ಐಟಿ ಮುಂದಾಗಿದ್ದಾರೆ. ಅಲ್ಲಿ ಬೆಳೆದಿರುವಂತ ಗಿಡ ಗೆಂಟೆಗಳನ್ನು ಕಟಾವು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಿ ಏನಾದರೂ ಅಸ್ಥಿ ಪಂಜರಗಳು ದೊರೆಯಲಿವೆಯೇ ಎಂಬುದನ್ನು ಕಾದು ನೋಡಬೇಕಿದೆ.