ಬೆಂಗಳೂರು : ಸ್ಯಾಂಡಲ್ ವುಡ್ ಯುವ ನಟ 34 ವರ್ಷದ ಸಂತೋಷ್ ಬಾಲರಾಜ್ ಜಾಂಡೀಸ್ನಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ ಎನ್ನಲಾಗಿದೆ.
ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಅವರು ಕೋಮಾದಲ್ಲಿ ಇದ್ದಾರೆ. ಜಾಂಡಿಸ್ ತಗುಲಿದ್ದರಿಂದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ‘ಕರಿಯ 2’, ‘ಕೆಂಪ’, ‘ಗಣಪ’, ‘ಬರ್ಕ್ಲಿ’, ‘ಸತ್ಯ’ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ಅವರು ಅಭಿನಯಿಸಿದ್ದಾರೆ.
ಜಾಂಡೀಸ್ ತೀವ್ರವಾಗಿರುವ ಕಾರಣ ಅವರನ್ನು ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.