ಬೆಳಗಾವಿ : ರಾಜ್ಯದಲ್ಲೊಂದು ಹೈಟೆಕ್ ಮಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್ ಫೋನ್ ಇಟ್ಟು ವಾಮಾಚಾರ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಹೌದು, ಬೆಳಗಾವಿಯಲ್ಲೊಂದು ಹೈಟೆಕ್ ವಾಮಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದ ಹೊರವಲಯದ ರೈತ ಸದಾನಂದ ದೇಸಾಯಿ ಎನ್ನುವ ರೈತನ ಹೊಲದಲ್ಲಿ ಮೊಬೈಲ್ ಇಟ್ಟು ವಾಮಾಚಾರ ಮಾಡಲಾಗಿದೆ.
ಜಮೀನಿನ ರೈತರು ರೈತ ಮುಖಂಡ ರಾಜು ಮರವೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಹೋಗಿ ನೋಡಿದಾಗ ಲಿಂಬೆಹಣ್ಣು, ಮೊಸ ಮೊಸರನ್ನ ಜೊತೆಗೆ ಸ್ಮಾರ್ಟ್ಫೋನ್ ಇರುವುದು ಕಂಡುಬಂದಿದೆ. ಮೊಬೈಲ್ ಜೊತೆಗೆ ಲಿಂಬೆಹಣ್ಣು, ತೆಂಗಿನಕಾಯಿ, ಎಲೆ ಅಡಿಕೆ, ಕ್ಯಾರ್ಬೀಜ ಹಾಕಿ, ಗಿಡಕ್ಕೆ ಗಂಟು ಕಟ್ಟಿ ವಾಮಾಚಾರ ನಡೆಸಲಾಗಿದೆ.