ರಾಯಚೂರು: ಪತಿಯನ್ನು ಪತ್ನಿಯೊಬ್ಬರು ಸೆಲ್ಫಿ ತೆಗೆಯೋ ಸಂದರ್ಭದಲ್ಲಿ ನದಿಗೆ ತಳ್ಳಿದಂತ ಘಟನೆ ನಡೆದಿತ್ತು. ಈ ಬ್ರಡ್ಜ್ ಮೇಲಿನಿಂದ ಪತಿಯನ್ನ ನದಿಗೆ ತಳ್ಳಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿ ತಾತಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಇದೀಗ ತಾತಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು, ಬಾಲ್ಯ ವಿವಾಹ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿ ತಾತಪ್ಪನನ್ನು ರಾಯಚೂರಿನ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪತಿ ತಾತಪ್ಪ ವಿರುದ್ಧವೂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾತಪ್ಪ ಬಾಲ್ಯವಿವಾಹವಾಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಕೇಸ್ ದಾಖಲಾಗಿತ್ತು.
ಅಂದಹಾಗೇ ತಾತಪ್ಪ 15 ವರ್ಷ 8 ತಿಂಗಳ ಅಪ್ರಾಪ್ತೆಯನ್ನು ವಿವಾಹವಾಗಿದ್ದರು. ಹೀಗಾಗಿ ತಾತಪ್ಪ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ತಾತಪ್ಪ, ಆತನ ತಾಯಿ, ಅಪ್ರಾಪ್ತೆ ತಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದೇವಸುಗೂರು ಪಿಡಿಒ ರವಿಕುಮಾರ್ ನೀಡಿದ್ದಂತ ದೂರಿನ ಅಡಿಯಲ್ಲಿ ಕೇಸ್ ದಾಖಲಾಗಿದೆ.