Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

04/08/2025 11:45 AM

BIG NEWS : ‘KRS’ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ : ಆರ್.ಅಶೋಕ್ ಗಂಭೀರ ಆರೋಪ

04/08/2025 11:45 AM

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

04/08/2025 11:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘KRS’ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ : ಆರ್.ಅಶೋಕ್ ಗಂಭೀರ ಆರೋಪ
KARNATAKA

BIG NEWS : ‘KRS’ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ : ಆರ್.ಅಶೋಕ್ ಗಂಭೀರ ಆರೋಪ

By kannadanewsnow0504/08/2025 11:45 AM

ಬೆಂಗಳೂರು :ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆ.ಆರ್.ಎಸ್. ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಪುಣ್ಯ ಸ್ಮರಣೆ ದಿನದಂದೇ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ KRS ಜಲಾಶಯಕ್ಕೆ ಮತಾಂಧ ಟಿಪ್ಪು ಸುಲ್ತಾನನ ಹೆಸರಿಟ್ಟು TS ಜಲಾಶಯ ಎಂದು ಮರುನಾಮಕರಣ ಮಾಡುವ ಹುನ್ನಾರ ನಡೆಯುತ್ತಿದೆಯೇ? ಎಂದು ಆರ್.ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ನಲ್ಲಿ ನಾಡದ್ರೋಹಿ, ಮತಾಂಧ ಟಿಪ್ಪು ಸುಲ್ತಾನ ಸತ್ತಿದ್ದು 1799ರಲ್ಲಿ. ಮೈಸೂರು ಭಾಗದ ಗ್ರಾಮೀಣ ಜನರ ನಾಲಿಗೆಯ ಮೇಲೆ ಇಂದಿಗೂ ಕನ್ನಂಬಾಡಿ ಕಟ್ಟೆ ಎಂದೇ ಕರೆಸಿಕೊಳ್ಳುವ ಕೆಆರ್ ಎಸ್ ಜಲಾಶಯದ ಕಾಮಗಾರಿ ಪ್ರಾರಂಭವಾದದ್ದು 1911ರಲ್ಲಿ.
1799ರಲ್ಲಿ ಸತ್ತ ಮತಾಂಧ ಟಿಪ್ಪು ಸುಲ್ತಾನನಿಗೂ, ಅವನು ಸತ್ತ ಮೇಲೆ ಸರಿಸುಮಾರು 112 ವರ್ಷ ಆದಮೇಲೆ ಕಾಮಗಾರಿ ಪ್ರಾರಂಭವಾದ ಕನ್ನಂಬಾಡಿ ಕಟ್ಟೆಗೂ ಏನು ಸಂಬಂಧ ಸಚಿವ @CMahadevappa ನವರೇ? ನಿಮ್ಮ ಬಾಲಿಶ ಹೇಳಿಕೆ ಗೋಕುಲಾಷ್ಟಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತಾಗಿದೆ.

ಇತಿಹಾಸ ಸ್ವಲ್ಪ ಓದಿಕೊಳ್ಳಿ. ಮದ್ರಾಸ್‌ನ ಬ್ರಿಟಿಷ್ ಪ್ರಾಂತೀಯ ಸರ್ಕಾರ ಒಪ್ಪಿಗೆ ನೀಡಿದ್ದು 80 ಅಡಿ ಎತ್ತರದ ಅಣೆಕಟ್ಟೆಗೆ. ಆದರೆ ಮಹಾರಾಜರು 124 ಅಡಿ ಎತ್ತರದ ಅಣೆಕಟ್ಟೆ ನಿರ್ಮಿಸುವ ಯೋಜನೆ ರೂಪಿಸಿದರು. ಪ್ರಾರಂಭಿಕ ಅಂದಾಜು ವೆಚ್ಚ 2 ಕೋಟಿ 35 ಲಕ್ಷ ರೂ. ಅಂದಿನ ರಾಜ್ಯದ ಆದಾಯವನ್ನೆಲ್ಲ ಇದೊಂದಕ್ಕೇ ಬಳಸುವುದು ಸಾಧ್ಯವಿರಲಿಲ್ಲ.

ಆಗ ಕೃಷ್ಣರಾಜ ಒಡೆಯರ್ ಮತ್ತು ರಾಜಮಾತೆಯವರು ತೆಗೆದುಕೊಂಡ ತೀರ್ಮಾನ ಅಪೂರ್ವವಾದದ್ದು. ಅರಮನೆಯ ಖಾಸಗಿ ಭಂಡಾರದಲ್ಲಿದ್ದ ನಾಲ್ಕು ಮೂಟೆಗಳಷ್ಟು ವಜ್ರ, ವೈಢೂರ್ಯ, ಚಿನ್ನಾಭರಣಗಳು ಮತ್ತು ಬೆಳ್ಳಿ ನಾಣ್ಯಗಳನ್ನು ಮುಂಬಯಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿ ಬಂದ ಹಣವನ್ನು ಕನ್ನಂಬಾಡಿಯ ಕಟ್ಟೆ ನಿರ್ಮಾಣಕ್ಕೆ ವಿನಿಯೋಗಿಸಿದರು.

ಕನ್ನಂಬಾಡಿ ಕಟ್ಟೆ ಎಂದೊಡನೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನೆನಪಾಗುತ್ತಾರೆ. ಆದ್ದರಿಂದಲೇ ಕನ್ನಂಬಾಡಿ ಕಟ್ಟೆಗೆ ”ಕೃಷ್ಣರಾಜ ಸಾಗರ” ಎಂಬ ಹೆಸರು ಇಡುವ ಮೂಲಕ ಅವರ ಹೆಸರನ್ನು ಸ್ಮರಿಸಲಾಗಿದೆ. ಈಗ @INCKarnataka ಸರ್ಕಾರದ ವರಸೆ ನೋಡುತ್ತಿದ್ದರೆ ಕೆ ಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ ಎನ್ನಿಸುತ್ತಿದೆ.

ಇತ್ತೀಚೆಗಷ್ಟೇ ಸಿಎಂ @siddaramaiah ಅವರ ಪುತ್ರ @Dr_Yathindra_S ಅವರು ಸಿದ್ದರಾಮಯ್ಯನವರು ನಾಲ್ವಡಿ ಅವರಿಗಿಂತ ದೊಡ್ಡವರು ಎನ್ನುವಂತೆ ಮಾತನಾಡಿ ನಾಲ್ವಡಿ ಅವರಿಗೆ ಅಪಮಾನ ಮಾಡಿದರು. ಈಗ ಸಿದ್ದರಾಮಯ್ಯನವರ ಆಪ್ತ ಸಚಿವ ಮಹದೇವಪ್ಪನವರು ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಮತಾಂಧ ಟಿಪ್ಪು ಸುಲ್ತಾನ ಎಂದು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಮತ್ತೊಮ್ಮೆ ಅಪಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತ ವಲಯದಿಂದ ಕೇಳಿಬರುತ್ತಿರುವ ಈ ಹೇಳಿಕೆಗಳನ್ನು ಗಮನಿಸಿದರೆ ಮೈಸೂರು ರಾಜಮನೆತನದ ತೇಜೋವಧೆ ಮಾಡುವ, ಆ ಮನೆತನದ ಗೌರವಕ್ಕೆ ಮಸಿ ಬಳಿಯುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಅನ್ನಿಸುತ್ತಿದೆ.

ನಾಲ್ವಡಿ ಕೃಷ್ಣರಾಜ ಒಡೆಯರು ಆಧುನಿಕ ಮೈಸೂರಿನ ಮಹಾಶಿಲ್ಪಿ ಎಂದೇ ಅವರ ಹೆಸರು ಇತಿಹಾಸದಲ್ಲಿ ದಾಖಲಾಗಿದೆ. ಮೈಸೂರು ಸೀಮೆಯ ಜನರಿಗೆ ಅವರು ಇಂದಿಗೂ ಪ್ರಾತಃಸ್ಮರಣೀಯರು. ಹಿಂದುಳಿದ ಜನಾಂಗಗಳು, ದಲಿತರು, ಬಡಬಗ್ಗರ ಬಗ್ಗೆ ಅಪಾರ ಕಾಳಜಿ ಇದ್ದ ಅವರ ಬಗ್ಗೆ ಮೈಸೂರು ಪ್ರಾಂತ್ಯದ ಜನರಿಗೆ ಈಗಲೂ ಅಪಾರ ಗೌರವ. ರೈತರ ಪಾಲಿಗೆ ಅವರು ಅನ್ನದಾತ.

ಇಂತಹ ಮೇರು ವ್ಯಕ್ತಿತ್ವದ ನಾಲ್ವಡಿ ಅವರಿಗೆ ಮಸಿ ಬಳಿಯುವ ಕೆಲಸ ಯಾರಿಗೂ ಶೋಭೆ ತರುವುದಿಲ್ಲ. ಮೈಸೂರು ರಾಜಮನೆತನದ ತಂಟೆಗೆ ಬಂದ ಯಾರೂ ಇದುವರೆಗೂ ಉದ್ಧಾರ ಆಗಿಲ್ಲ. ಕಾಂಗ್ರೆಸ್ ನಾಯಕರು ಇದನ್ನ ನೆನಪಿಟ್ಟುಕೊಳ್ಳಬೇಕು. ತಮ್ಮ ಕ್ಷುಲ್ಲಕ ರಾಜಕೀಯಕ್ಕೆ ಮೈಸೂರು ರಾಜಮನೆತನದ ಹೆಸರನ್ನು ಪದೇ ಪದೇ ಎಳೆದು ತಂದು ಅಪಮಾನ ಮಾಡಿದರೆ ಈ ನಾಡಿನ ಜನತೆ ಸಹಿಸುವುದಿಲ್ಲ, @BJP4Karnataka ಸುಮ್ಮನೆ ಕೂರುವುದಿಲ್ಲ. ಎಚ್ಚರಿಕೆ.

ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು 10 ಆಗಸ್ಟ್ 2025 ರಂದು ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆ ಮತ್ತು ನಮ್ಮ ಮೆಟ್ರೋ ಮೂರನೇ ಹಂತದ ಶಂಕುಸ್ಥಾಪನೆಗಾಗಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

ರಾಜ್ಯಾಧ್ಯಕಾರದ ಶ್ರೀ @BYVijayendra, ಸಂಸದ ಶ್ರೀ… https://t.co/OoYctG3fU1

— R. Ashoka (@RAshokaBJP) August 4, 2025

Share. Facebook Twitter LinkedIn WhatsApp Email

Related Posts

BIG NEWS : ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

04/08/2025 11:45 AM1 Min Read

BREAKING : `KRS’ ಡ್ಯಾಂ ಕಟ್ಟಿದ್ದು ಟಿಪ್ಪು ಅಲ್ಲ, `ನಾಲ್ವಡಿ ಕೃಷ್ಣರಾಜ್ ಒಡೆಯರ್’ : ಸಚಿವ ಹೆಚ್.ಸಿ. ಮಹದೇವಪ್ಪ ಸ್ಪಷ್ಟನೆ

04/08/2025 11:28 AM1 Min Read

BREAKING : `KRS’ಡ್ಯಾಂ ಕಟ್ಟಿದ್ದು `ಟಿಪ್ಪು ಸುಲ್ತಾನ್’ ಎಂದು ನಾನು ಹೇಳಿಲ್ಲ : ಸಚಿವ HC ಮಹದೇವಪ್ಪ ಸ್ಪಷ್ಟನೆ

04/08/2025 11:22 AM1 Min Read
Recent News

BIG NEWS : ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

04/08/2025 11:45 AM

BIG NEWS : ‘KRS’ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ : ಆರ್.ಅಶೋಕ್ ಗಂಭೀರ ಆರೋಪ

04/08/2025 11:45 AM

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

04/08/2025 11:42 AM

BREAKING : ಚೀನಾದಿಂದ ‘ಭೂಕಬಳಿಕೆ’ ಹೇಳಿಕೆ : ರಾಹುಲ್ ಗಾಂಧಿ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

04/08/2025 11:42 AM
State News
KARNATAKA

BIG NEWS : ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

By kannadanewsnow5704/08/2025 11:45 AM KARNATAKA 1 Min Read

ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

BIG NEWS : ‘KRS’ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ : ಆರ್.ಅಶೋಕ್ ಗಂಭೀರ ಆರೋಪ

04/08/2025 11:45 AM

BREAKING : `KRS’ ಡ್ಯಾಂ ಕಟ್ಟಿದ್ದು ಟಿಪ್ಪು ಅಲ್ಲ, `ನಾಲ್ವಡಿ ಕೃಷ್ಣರಾಜ್ ಒಡೆಯರ್’ : ಸಚಿವ ಹೆಚ್.ಸಿ. ಮಹದೇವಪ್ಪ ಸ್ಪಷ್ಟನೆ

04/08/2025 11:28 AM

BREAKING : `KRS’ಡ್ಯಾಂ ಕಟ್ಟಿದ್ದು `ಟಿಪ್ಪು ಸುಲ್ತಾನ್’ ಎಂದು ನಾನು ಹೇಳಿಲ್ಲ : ಸಚಿವ HC ಮಹದೇವಪ್ಪ ಸ್ಪಷ್ಟನೆ

04/08/2025 11:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.